ಸುಳ್ಯ: ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತಪಡಿಸಿದ್ದ ಸುಳ್ಯ ಬಿಜೆಪಿ ಈಗ ಶಾಂತವಾಗಿದೆಯೇ ? ಎಸ್ ಅಂಗಾರ ಅವರಿಗೆ ಮುಂದಿನ ಸಚಿವ ಹಂತದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಅಥವಾ ಪ್ರಮುಖವಾದ ನಿಗಮದ ಹುದ್ದೆ ನೀಡುವ ಭರವಸೆಯನ್ನು ಪಕ್ಷದ ಹಿರಿಯರು ನೀಡಿದ್ದು ಈ ಮೂಲಕ ಸುಳ್ಯ ಬಿಜೆಪಿ ಪ್ರಮುಖರನ್ನು ಸಮಾಧಾನ ಪಡಿಸಿರುವ ಬಗ್ಗೆ ಮೂಲಗಳು ಮಾಹಿತಿ ನೀಡಿವೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸುಳ್ಯ ವಿಧಾನ ಸಭಾ ಕ್ಷೇತ್ರದ ನಂಟು ಹೊಂದಿರುವ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರು ಘೋಷಣೆಯಾದ ಬೆನ್ನಲ್ಲೇ ಅವರದೇ ತವರು ಕ್ಷೇತ್ರದ ಅಸಮಾಧಾನ ಶಮನ ಮಾಡಲು ತಕ್ಷಣವೇ ಮಾತುಕತೆ ನಡೆಸಿದ್ದು ದಕ್ಷಿಣ ಕನ್ನಡ ಜಿಲ್ಲೆಯಿಂದ ಮುಂದಿನ ಹಂತದ ಸಚಿವ ಸಂಪುಟ ವಿಸ್ತರಣೆಯ ವೇಳೆ ಅಂಗಾರ ಅವರಿಗೆ ಸಚಿವ ಸ್ಥಾನ ಅಥವಾ ಪ್ರಮುಖ ನಿಮಗದ ಹುದ್ದೆ ನೀಡುವ ಭರವಸೆಯನ್ನು ಪಕ್ಷದ ಹಿರಿಯರು ನೀಡಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ. ಇದರ ಜೊತೆಗೆ ಅಸಮಾಧಾನದ ಬಗ್ಗೆ ಯಾವುದೇ ಹೇಳಿಕೆಗಳನ್ನು ಮಾಧ್ಯಮಗಳ ಮೂಲಕ ನೀಡಬಾರದು ಎಂದೂ ಸ್ಪಷ್ಟವಾದ ಸೂಚನೆ ನೀಡಿದ್ದು , ಪಕ್ಷದ ಒಳಗಿನ ಆಂತರಿಕ ಸಂಗತಿಗಳನ್ನು , ಅನಗತ್ಯವಾಗಿ ಅಭಿಪ್ರಾಯಗಳನ್ನು ಮಾಧ್ಯಮಗಳ ಮೂಲಕ ಹಂಚಿ ಗೊಂದಲ ಸೃಷ್ಟಿಸಿದರೆ ಯಾವುದೇ ಹುದ್ದೆ ಸಿಗುವುದೂ ಕಷ್ಟವಾಗಬಹುದು ಎಂಬ ಖಡಕ್ ಸೂಚನೆ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…