ಸುಳ್ಯ: ಅಲ್ಲ ಮಾರಾಯ್ರೆ ಇದೆಂತ ಸುಳ್ಯದ ಕತೆ. ಅಲ್ಲಿ ನೋಡಿದ್ರೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಧಿಕಾರಿಯೊಬ್ಬರು ಲಂಚ ತೆಗೆಯುತ್ತಿರುವುದು ಬೆಳಕಿಗೆ ಬಂದಿದೆ.
ಇಲ್ಲಿ ನೋಡಿದ್ರೆ ನಗರ ಪಂಚಾಯತ್ ನಲ್ಲಿ ಮತ್ತೊಂದು ಸಮಸ್ಯೆ . ನೀರಿಲ್ಲ , ಬೀದಿ ದೀಪ ಸರಿ ಇಲ್ಲ ಅಂತ ಸದಸ್ಯರೊಬ್ಬರು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಸರಿ ಆಗುವುದು ಯಾವಾಗ ಮಾರ್ರೆ ಇದೆಲ್ಲಾ ? ಸರಿ ಆಗುತ್ತಾ ಅಂತ ಹತಾಶೆ ಪ್ರಶ್ನೆ ಕೇಳುವ ಮುನ್ನ ಸರಿಯಾಗಲಿ.
ಇವತ್ತೇನಾಯ್ತು ?
ನಗರ ಪಂಚಾಯತ್ ನ ಬೋರುಗುಡ್ಡೆ ವಾರ್ಡ್ ನಲ್ಲಿ ಕಳೆದ ಎರಡು ವಾರಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಬೀದಿ ದೀಪ ವ್ಯವಸ್ಥೆ ಸರಿ ಇಲ್ಲ. ಇದನ್ನು ಪ್ರತಿಭಟಿಸಿ ನಗರ ಪಂಚಾಯತ್ ಸದಸ್ಯ ಕೆ.ಎಸ್.ಉಮ್ಮರ್ ನಗರ ಪಂಚಾಯತ್ ಗೆ ಆಗಮಿಸಿ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ತೀವ್ರ ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.
ಎರಡು ವಾರಗಳಿಂದ ಜನರು ಮತ್ತು ಜನಪ್ರತಿನಿಧಿಗಳು ನಿರಂತರ ಬೇಡಿಕೆ ಸಲ್ಲಿಸುತ್ತಾ ಬಂದಿದ್ದರೂ ಪ್ರತಿಕ್ರಿಯೆ ಸಿಕ್ಕಿಲ್ಲ ಸಮಸ್ಯೆ ಪರಿಹಾರವಾಗಿಲ್ಲ ಎಂದು ಸೋಮವಾರ ಬೆಳಿಗ್ಗೆ ನಗರ ಪಂಚಾಯತ್ ಗೆ ಆಗಮಿಸಿದ ಉಮ್ಮರ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ತೀವ್ರ ತರಾಟಡಗೆತ್ತಿಕೊಂಡರು. ಇದರ ವೀಡಿಯೋ ವೈರಲ್ ಆಗಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…