ಸುಳ್ಯ: ಅಲ್ಲ ಮಾರಾಯ್ರೆ ಇದೆಂತ ಸುಳ್ಯದ ಕತೆ. ಅಲ್ಲಿ ನೋಡಿದ್ರೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಧಿಕಾರಿಯೊಬ್ಬರು ಲಂಚ ತೆಗೆಯುತ್ತಿರುವುದು ಬೆಳಕಿಗೆ ಬಂದಿದೆ.
ಇಲ್ಲಿ ನೋಡಿದ್ರೆ ನಗರ ಪಂಚಾಯತ್ ನಲ್ಲಿ ಮತ್ತೊಂದು ಸಮಸ್ಯೆ . ನೀರಿಲ್ಲ , ಬೀದಿ ದೀಪ ಸರಿ ಇಲ್ಲ ಅಂತ ಸದಸ್ಯರೊಬ್ಬರು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಸರಿ ಆಗುವುದು ಯಾವಾಗ ಮಾರ್ರೆ ಇದೆಲ್ಲಾ ? ಸರಿ ಆಗುತ್ತಾ ಅಂತ ಹತಾಶೆ ಪ್ರಶ್ನೆ ಕೇಳುವ ಮುನ್ನ ಸರಿಯಾಗಲಿ.
ಇವತ್ತೇನಾಯ್ತು ?
ನಗರ ಪಂಚಾಯತ್ ನ ಬೋರುಗುಡ್ಡೆ ವಾರ್ಡ್ ನಲ್ಲಿ ಕಳೆದ ಎರಡು ವಾರಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಬೀದಿ ದೀಪ ವ್ಯವಸ್ಥೆ ಸರಿ ಇಲ್ಲ. ಇದನ್ನು ಪ್ರತಿಭಟಿಸಿ ನಗರ ಪಂಚಾಯತ್ ಸದಸ್ಯ ಕೆ.ಎಸ್.ಉಮ್ಮರ್ ನಗರ ಪಂಚಾಯತ್ ಗೆ ಆಗಮಿಸಿ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ತೀವ್ರ ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.
ಎರಡು ವಾರಗಳಿಂದ ಜನರು ಮತ್ತು ಜನಪ್ರತಿನಿಧಿಗಳು ನಿರಂತರ ಬೇಡಿಕೆ ಸಲ್ಲಿಸುತ್ತಾ ಬಂದಿದ್ದರೂ ಪ್ರತಿಕ್ರಿಯೆ ಸಿಕ್ಕಿಲ್ಲ ಸಮಸ್ಯೆ ಪರಿಹಾರವಾಗಿಲ್ಲ ಎಂದು ಸೋಮವಾರ ಬೆಳಿಗ್ಗೆ ನಗರ ಪಂಚಾಯತ್ ಗೆ ಆಗಮಿಸಿದ ಉಮ್ಮರ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ತೀವ್ರ ತರಾಟಡಗೆತ್ತಿಕೊಂಡರು. ಇದರ ವೀಡಿಯೋ ವೈರಲ್ ಆಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…