ಸುಳ್ಯ: ಸುಳ್ಯದ ಗ್ರಾಮೀಣ ರಸ್ತೆ ದುರಸ್ತಿ ಮಾಡಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸುಳ್ಯದ ಬಿಜೆಪಿ ನಿಯೋಗ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಿತು. ಶುಕ್ರವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗ ಸಂಪೂರ್ಣ ಹದಗೆಟ್ಟಿರುವ ಸುಳ್ಯದ ಗ್ರಾಮೀಣ ರಸ್ತೆಗಳನ್ನು ದುರಸ್ಥಿ ಪಡಿಸಲು ಅನುದಾನ ಒದಗಿಸಬೇಕು ಎಂದು ಮನವಿ ಸಲ್ಲಿಸಿದರು.
ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಮುಖಂಡರಾದ ಎಸ್.ಎನ್.ಮನ್ಮಥ, ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ಎನ್.ಎ.ರಾಮಚಂದ್ರ, ಸುಧಾಕರ ಕಾಮತ್, ವಿನಯಕುಮಾರ್ ಕಂದಡ್ಕ, ದಿನೇಶ್ ಮೆದು, ರಾಕೇಶ್ ರೈ ಕೆಡೆಂಜಿ ಮತ್ತಿತರರು ನಿಯೋಗದಲ್ಲಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…