ಸುಳ್ಯ: ಸುಳ್ಯ ವಿಧದಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾದ ಅಂಗಾರರಿಗೆ ಮಂತ್ರಿ ಸ್ಥಾನ ನೀಡದೆ ಬಿಜೆಪಿ ಅನ್ಯಾಯ ಮಾಡಿದೆ. ಮಾತ್ರವಲ್ಲದೆ ಈ ಮೂಲಕ ಸುಳ್ಯಕ್ಕೆ ಮತ್ತೊಮ್ಮೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಗೆ ಅವಮಾನ ಮಾಡಿದೆ. ಸುಳ್ಯದಲ್ಲಿ ಅತಿ ಹೆಚ್ಚು ರೈತರಿದ್ದು ನಮ್ಮ ಸಮಸ್ಯೆ ಹೇಳಿಕೊಳ್ಳಲು ಮತ್ತು ಪರಿಹಾರ ದೊರಕಲು ಸುಲಭವಾಗುತ್ತಿತ್ತು . ಹಾಗಾಗಿ ಸುಳ್ಯಕ್ಕೆ ಸಚಿವ ಸ್ಥಾನ ನೀಡದೇ ಇರುವುದು ತುಂಬಾ ನೋವು ತಂದಿದೆ ಮತ್ತು ನಮ್ಮ ರೈತ ಸಂಘವು ತೀವ್ರವಾಗಿ ಖಂಡಿಸುತ್ತದೆ ಎಂದು ತಾಲೂಕು ರೈತ ಸಂಘ ಮತ್ತು ಹಸಿರುಸೇನೆ ಇದರ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ಹೇಳಿದ್ದಾರೆ.
ಸುಳ್ಯದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಾದರೂ ನಮ್ಮ ಜಿಲ್ಲೆಯ ರೈತರನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು ಸುಳ್ಯಕ್ಕೆ ಮಂತ್ರಿಸ್ಥಾನ ನೀಡಲಿ ಎಂದು ಭಾವಿಸುತ್ತೇವೆ ಎಂದು ತೀರ್ಥರಾಮ ನೆಡ್ಚಿಲು ಹೇಳಿದರು.
ಜಿಲ್ಲಾ ರೈತ ಸಂಘದ ಅದ್ಯಕ್ಷರಾದ ಸುರೇಶ್ ಭಟ್ ಕೊಜಂಬೆ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 7 ಜನ ಶಾಸಕರಿದ್ದು ಇನ್ನು ಮುಂದೆ ಜಿಲ್ಲೆಯಲ್ಲಿ ಬಿಜೆಪಿ ಯನ್ನು ಜಿಲ್ಲೆಯ ಜನ ಬೆಂಬಲಿಸಬೇಕೇ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಲೋಲಜಾಕ್ಷ ಭೂತಕಲ್ಲು, ತೀರ್ಥರಾಮ ಅರಂತೋಡು , ಲೋಕಯ್ಯ ಅತ್ಯಾಡಿ , ಮುರಳೀಧರ ಅಡ್ಕಾರು , ದಿವಾಕರ ಪೈ ಮಾಜಿಗುಂಡಿ , ನಾರಾಯಣ ಪಾಟಾಳಿ ಉಬರಡ್ಕ , ತೀರ್ಥರಾಮ ತೊಡಿಕಾನ , ಸೆಬಾಸ್ಟಿಯನ್ ಮಡಪ್ಪಾಡಿ,ಧರ್ಮಪಾಲ ಗೌಡ ಕೊಯಿಂಗಾಜೆ ಮತ್ತಿತರರು ಉಪಸ್ಥಿತರಿದ್ದರು.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…