Advertisement
ಸುದ್ದಿಗಳು

ಸುಳ್ಯದ ನಿಷ್ಠಾವಂತ ಶಾಸಕ ಅಂಗಾರರ ಕಡೆಗಣನೆ : ತಾಲೂಕು ರೈತ ಸಂಘ ಆಕ್ರೋಶ

Share

ಸುಳ್ಯ: ಸುಳ್ಯ ವಿಧದಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾದ ಅಂಗಾರರಿಗೆ ಮಂತ್ರಿ ಸ್ಥಾನ ನೀಡದೆ ಬಿಜೆಪಿ ಅನ್ಯಾಯ ಮಾಡಿದೆ. ಮಾತ್ರವಲ್ಲದೆ ಈ ಮೂಲಕ ಸುಳ್ಯಕ್ಕೆ ಮತ್ತೊಮ್ಮೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಗೆ ಅವಮಾನ ಮಾಡಿದೆ. ಸುಳ್ಯದಲ್ಲಿ ಅತಿ ಹೆಚ್ಚು ರೈತರಿದ್ದು ನಮ್ಮ ಸಮಸ್ಯೆ ಹೇಳಿಕೊಳ್ಳಲು ಮತ್ತು ಪರಿಹಾರ ದೊರಕಲು ಸುಲಭವಾಗುತ್ತಿತ್ತು . ಹಾಗಾಗಿ ಸುಳ್ಯಕ್ಕೆ ಸಚಿವ ಸ್ಥಾನ ನೀಡದೇ ಇರುವುದು ತುಂಬಾ ನೋವು ತಂದಿದೆ ಮತ್ತು ನಮ್ಮ ರೈತ ಸಂಘವು ತೀವ್ರವಾಗಿ ಖಂಡಿಸುತ್ತದೆ ಎಂದು ತಾಲೂಕು ರೈತ ಸಂಘ ಮತ್ತು ಹಸಿರುಸೇನೆ ಇದರ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ಹೇಳಿದ್ದಾರೆ.

ಸುಳ್ಯದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಾದರೂ ನಮ್ಮ ಜಿಲ್ಲೆಯ ರೈತರನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು ಸುಳ್ಯಕ್ಕೆ ಮಂತ್ರಿಸ್ಥಾನ ನೀಡಲಿ ಎಂದು ಭಾವಿಸುತ್ತೇವೆ ಎಂದು  ತೀರ್ಥರಾಮ ನೆಡ್ಚಿಲು ಹೇಳಿದರು.

ಜಿಲ್ಲಾ ರೈತ ಸಂಘದ ಅದ್ಯಕ್ಷರಾದ ಸುರೇಶ್ ಭಟ್ ಕೊಜಂಬೆ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 7 ಜನ ಶಾಸಕರಿದ್ದು ಇನ್ನು ಮುಂದೆ ಜಿಲ್ಲೆಯಲ್ಲಿ ಬಿಜೆಪಿ ಯನ್ನು ಜಿಲ್ಲೆಯ ಜನ ಬೆಂಬಲಿಸಬೇಕೇ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಲೋಲಜಾಕ್ಷ ಭೂತಕಲ್ಲು, ತೀರ್ಥರಾಮ ಅರಂತೋಡು , ಲೋಕಯ್ಯ ಅತ್ಯಾಡಿ , ಮುರಳೀಧರ ಅಡ್ಕಾರು , ದಿವಾಕರ ಪೈ ಮಾಜಿಗುಂಡಿ , ನಾರಾಯಣ ಪಾಟಾಳಿ ಉಬರಡ್ಕ , ತೀರ್ಥರಾಮ ತೊಡಿಕಾನ , ಸೆಬಾಸ್ಟಿಯನ್ ಮಡಪ್ಪಾಡಿ,ಧರ್ಮಪಾಲ ಗೌಡ ಕೊಯಿಂಗಾಜೆ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

3 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

5 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

10 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

16 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

16 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago