ಸುಳ್ಯ: ಸುಳ್ಯ ವಿಧದಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾದ ಅಂಗಾರರಿಗೆ ಮಂತ್ರಿ ಸ್ಥಾನ ನೀಡದೆ ಬಿಜೆಪಿ ಅನ್ಯಾಯ ಮಾಡಿದೆ. ಮಾತ್ರವಲ್ಲದೆ ಈ ಮೂಲಕ ಸುಳ್ಯಕ್ಕೆ ಮತ್ತೊಮ್ಮೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಗೆ ಅವಮಾನ ಮಾಡಿದೆ. ಸುಳ್ಯದಲ್ಲಿ ಅತಿ ಹೆಚ್ಚು ರೈತರಿದ್ದು ನಮ್ಮ ಸಮಸ್ಯೆ ಹೇಳಿಕೊಳ್ಳಲು ಮತ್ತು ಪರಿಹಾರ ದೊರಕಲು ಸುಲಭವಾಗುತ್ತಿತ್ತು . ಹಾಗಾಗಿ ಸುಳ್ಯಕ್ಕೆ ಸಚಿವ ಸ್ಥಾನ ನೀಡದೇ ಇರುವುದು ತುಂಬಾ ನೋವು ತಂದಿದೆ ಮತ್ತು ನಮ್ಮ ರೈತ ಸಂಘವು ತೀವ್ರವಾಗಿ ಖಂಡಿಸುತ್ತದೆ ಎಂದು ತಾಲೂಕು ರೈತ ಸಂಘ ಮತ್ತು ಹಸಿರುಸೇನೆ ಇದರ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ಹೇಳಿದ್ದಾರೆ.
ಸುಳ್ಯದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಾದರೂ ನಮ್ಮ ಜಿಲ್ಲೆಯ ರೈತರನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು ಸುಳ್ಯಕ್ಕೆ ಮಂತ್ರಿಸ್ಥಾನ ನೀಡಲಿ ಎಂದು ಭಾವಿಸುತ್ತೇವೆ ಎಂದು ತೀರ್ಥರಾಮ ನೆಡ್ಚಿಲು ಹೇಳಿದರು.
ಜಿಲ್ಲಾ ರೈತ ಸಂಘದ ಅದ್ಯಕ್ಷರಾದ ಸುರೇಶ್ ಭಟ್ ಕೊಜಂಬೆ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 7 ಜನ ಶಾಸಕರಿದ್ದು ಇನ್ನು ಮುಂದೆ ಜಿಲ್ಲೆಯಲ್ಲಿ ಬಿಜೆಪಿ ಯನ್ನು ಜಿಲ್ಲೆಯ ಜನ ಬೆಂಬಲಿಸಬೇಕೇ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಲೋಲಜಾಕ್ಷ ಭೂತಕಲ್ಲು, ತೀರ್ಥರಾಮ ಅರಂತೋಡು , ಲೋಕಯ್ಯ ಅತ್ಯಾಡಿ , ಮುರಳೀಧರ ಅಡ್ಕಾರು , ದಿವಾಕರ ಪೈ ಮಾಜಿಗುಂಡಿ , ನಾರಾಯಣ ಪಾಟಾಳಿ ಉಬರಡ್ಕ , ತೀರ್ಥರಾಮ ತೊಡಿಕಾನ , ಸೆಬಾಸ್ಟಿಯನ್ ಮಡಪ್ಪಾಡಿ,ಧರ್ಮಪಾಲ ಗೌಡ ಕೊಯಿಂಗಾಜೆ ಮತ್ತಿತರರು ಉಪಸ್ಥಿತರಿದ್ದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…