ಸುಳ್ಯ: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಸುಳ್ಯದ ಶಾಸಕ ಎಸ್. ಅಂಗಾರರನ್ನು ಕಡೆಗಣಿಸಲಾಗಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾದ ಪಕ್ಷ ನಿಷ್ಠೆ ಹೊಂದಿರುವ ಯಾವುದೇ ಕಳಂಕವಿಲ್ಲದ ಆರ್.ಎಸ್.ಎಸ್. ಕಾರ್ಯಕರ್ತರಾಗಿರುವ ಅಂಗಾರರಿಗೆ ಮಂತ್ರಿ ಸ್ಥಾನ ನೀಡದೆ ಬಿಜೆಪಿ ಹೈಕಮಾಂಡ್ ನೈತಿಕತೆ ಕಳೆದುಕೊಂಡಿದೆ. ಆ ಮೂಲಕ ಸುಳ್ಯಕ್ಕೆ ಮತ್ತೊಮ್ಮೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಗೆ ಅವಮಾನ ಮಾಡಿದೆ. ಬಿಜೆಪಿ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಾದರೂ ಅವಕಾಶ ನೀಡಲಿ ಎಂದು ಬಯಸುತ್ತೇವೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಗೌಡ ಕೊಯಿಂಗಾಜೆ ಪ್ರತಿಕ್ರಿಯೆ ನೀಡಿದ್ದಾರೆ.
ಸುಳ್ಯ ನಗರದ ಅಬಿವೃದ್ದಿಯಾಗುವ ನಮ್ಮ ಕನಸು ಕನಸಾಗಿ ಉಳಿಯಲಿದೆ: ಶರೀಫ್ ಕಂಠಿ
ನಮ್ಮ ಸುಳ್ಯದ ಶಾಸಕ ಅಂಗಾರರವರು ಸಚಿವರಾಗಿ ಸುಳ್ಯ ನಗರದ ಅಬಿವೃದ್ದಿಯಾಗುವ ನಮ್ಮ ಕನಸು ಕನಸಾಗಿ ಉಳಿಯಲಿದೆ ಬಿಜೆಪಿ ಸರಕಾರ ನಿಷ್ಠಾವಂತರಿಗೆ ಅವಕಾಶ ಕೊಡುವುದಿಲ್ಲ.ಭ್ರಷ್ಟರಿಗೆ ಮಣೆ ಹಾಕುತ್ತಾರೆ.ಯಾವಾಗ ನಮ್ಮ ನಗರ ಸುಂದರ ನಗರವಾಗುವುದು ಎಂದು ನಗರ ಪಂಚಾಯತ್ ಸದಸ್ಯ ಶರೀಪ್ ಕಂಠಿ ಪ್ರತಿಕ್ರಿಯೆ ನೀಡಿದ್ದಾರೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…