Advertisement
Categories: Uncategorized

ಸುಳ್ಯದ ರೈಲ್ವೇ ಪ್ರಯಾಣಿಕನ ಟ್ವಿಟ್ಟರ್ ದೂರಿಗೆ ತಕ್ಷಣ ಸ್ಪಂದಿಸಿದ ರೈಲ್ವೇ ಇಲಾಖೆ

Share

ಸುಳ್ಯ: ಮುಂಬಯಿಯಿಂದ ರೈಲ್ವೇ ಪ್ರಯಾಣ ಬೆಳೆಸಿದ ಸುಳ್ಯದ ಅವ್ಯಕ್ತ ಅವರ ಟ್ವಿಟ್ಟರ್ ದೂರಿಗೆ ರೈಲ್ವೇ ಇಲಾಖೆ ತಕ್ಷಣವೇ ಸ್ಪಂದಿಸಿ ಕೇವಲ 15 ನಿಮಿಷದಲ್ಲಿ ಪರಿಹಾರ ದೊರಕಿದೆ.

ಅವ್ಯಕ್ತ ಅವರು ಮುಂಬಯಿಯಿಂದ ಸುಳ್ಯದ ನಗರಸಭಾ ಚುನಾವಣೆಗೆ ಮತದಾನಕ್ಕಾಗಿ ನಿನ್ನೆ ರಾತ್ರಿ ರೈಲಿನಲ್ಲಿ  ಹೊರಟಿದ್ದರು. ರೈಲಿನಲ್ಲಿ  ಮುಂಬಯಿಂದ ಏರಿದ ಅವರಿಗೆ ಸರಿಯಾದ ದಿಂಬಿನ ವ್ಯವಸ್ಥೆ ಇದ್ದಿರಲಿಲ್ಲ. ಈ ಬಗ್ಗೆ ವಿಚಾರಣೆಗೂ ಸರಿಯಾದ ಅವಕಾಶ ಇರಲಿಲ್ಲ. ಇದಕ್ಕಾಗಿ ತಕ್ಷಣವೇ   ಟ್ವೀಟ್  ಮೂಲಕ ಪಿಯೂಶ್ ಗೋಯಲ್ ಹಾಗೂ ರೈಲ್ವೇ ಇಲಾಖೆಗೆ ಟ್ಯಾಗ್ ಮಾಡಿ ತಮ್ಮ ಸಮಸ್ಯೆಯನ್ನು  ಹೇಳಿದರು. ಅದಾದ ಮರುಕ್ಷಣವೇ ರೈಲ್ವೇ ಇಲಾಖೆಯಿಂದ  ಅವ್ಯಕ್ತ ಅವರು ಇರುವ ಬೋಗಿ ಹಾಗೂ ವಿವರ ಕೇಳಿ ಮೆಸೇಜ್ ಬಂತು. ಮುಂದೆ 15 ನಿಮಿಷದಲ್ಲಿ ಅವರ ಸಮಸ್ಯೆ ಪರಿಹಾರ ಕಂಡಿತು. ರೈಲ್ವೇ ಇಲಾಖೆ ಅಧಿಕಾರಿಗಳು ತಕ್ಷಣವೇ ಸ್ಪಂದನೆ ನೀಡಿದರು.

ಇದೊಂದೇ ಅಲ್ಲ, ಈ ಹಿಂದೆ ಅವ್ಯಕ್ತ ಅವರ ಲ್ಯಾಪ್ ಟಾಪ್ ರೈಲು ನಿಲ್ದಾಣದಲ್ಲಿ ಕಳವಾಗಿತ್ತು. ಈ ಸಂದಭದಲ್ಲಿ ತಕ್ಷಣವೇ ಟ್ವೀಟ್ ಮಾಡಿದ್ದರು. ಆಗಲೂ ಪಿಯೋಶ್ ಗೋಯಲ್ ಅವರ ಕಚೇರಿಯಿಂದ ಅಧಿಕಾರಿಗಳು ಹಾಗೂ ಸಿಬಂದಿಗಳು  ತಕ್ಷಣವೇ ಸ್ಪಂದನೆ ನೀಡಿ ಸಿಸಿ ಟಿವಿ ದೃಶ್ಯವನ್ನು ಕೂಡಾ ವೀಕ್ಷಣೆ ಮಾಡಿದ್ದರು. ಕಳ್ಳನ ಪತ್ತೆಗೆ ಸತತ ಪ್ರಯತ್ನ ಮಾಡಿದ್ದರು. ಇದೆಲ್ಲಾ ಕೇವಲ ಒಂದು ಟ್ವೀಟ್ ನಿಂದ. ಅದಕ್ಕಿಂತಲೂ ಮಿಗಿಲಾಗಿ ಒಂದು ಟ್ವೀಟ್ ಗೆ ಇಲಾಖೆಗಳು, ಸಚಿವರು ಸ್ಪಂದಿಸುವ ರೀತಿ ಖುಷಿಯಾಗಿದೆ ಎನ್ನುತ್ತಾರೆ ಅವ್ಯಕ್ತ. ಈ ದೇಶದಲ್ಲಿ ಜನಸಾಮಾನ್ಯನ ದೂರಿಗೆ, ಮನವಿಗೆ ಬೆಲೆ ಇದೆ ಎನ್ನುವುದು ಇಲ್ಲಿ  ತಿಳಿಯುತ್ತದೆ. ದೇಶದಲ್ಲಿ ಯಾರೂ ಅನಾಥರಾಗುವುದಿಲ್ಲ, ಎಲ್ಲರೂ ಟ್ವೀಟ್ ಮೂಲಕ ಇಲಾಖೆ ಜೊತೆ ಮಾತನಾಡಬಹುದು ಎಂಬುದಕ್ಕೆ ಇದೊಂದು ಸಾಕ್ಷಿ ಎನ್ನುತ್ತಾರೆ ಅವ್ಯಕ್ತ.

    ಅವ್ಯಕ್ತ  ಸುಳ್ಯದ ಬೀಗ್ರೋಸ್ ಮಾಲಕ. ಆರ್ ಕೆ ಭಟ್ ಸುಳ್ಯ ಅವರ ಪುತ್ರ.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

4 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

4 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

4 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

13 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

13 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

14 hours ago