Advertisement
Categories: Uncategorized

ಸುಳ್ಯದ ರೈಲ್ವೇ ಪ್ರಯಾಣಿಕನ ಟ್ವಿಟ್ಟರ್ ದೂರಿಗೆ ತಕ್ಷಣ ಸ್ಪಂದಿಸಿದ ರೈಲ್ವೇ ಇಲಾಖೆ

Share

ಸುಳ್ಯ: ಮುಂಬಯಿಯಿಂದ ರೈಲ್ವೇ ಪ್ರಯಾಣ ಬೆಳೆಸಿದ ಸುಳ್ಯದ ಅವ್ಯಕ್ತ ಅವರ ಟ್ವಿಟ್ಟರ್ ದೂರಿಗೆ ರೈಲ್ವೇ ಇಲಾಖೆ ತಕ್ಷಣವೇ ಸ್ಪಂದಿಸಿ ಕೇವಲ 15 ನಿಮಿಷದಲ್ಲಿ ಪರಿಹಾರ ದೊರಕಿದೆ.

ಅವ್ಯಕ್ತ ಅವರು ಮುಂಬಯಿಯಿಂದ ಸುಳ್ಯದ ನಗರಸಭಾ ಚುನಾವಣೆಗೆ ಮತದಾನಕ್ಕಾಗಿ ನಿನ್ನೆ ರಾತ್ರಿ ರೈಲಿನಲ್ಲಿ  ಹೊರಟಿದ್ದರು. ರೈಲಿನಲ್ಲಿ  ಮುಂಬಯಿಂದ ಏರಿದ ಅವರಿಗೆ ಸರಿಯಾದ ದಿಂಬಿನ ವ್ಯವಸ್ಥೆ ಇದ್ದಿರಲಿಲ್ಲ. ಈ ಬಗ್ಗೆ ವಿಚಾರಣೆಗೂ ಸರಿಯಾದ ಅವಕಾಶ ಇರಲಿಲ್ಲ. ಇದಕ್ಕಾಗಿ ತಕ್ಷಣವೇ   ಟ್ವೀಟ್  ಮೂಲಕ ಪಿಯೂಶ್ ಗೋಯಲ್ ಹಾಗೂ ರೈಲ್ವೇ ಇಲಾಖೆಗೆ ಟ್ಯಾಗ್ ಮಾಡಿ ತಮ್ಮ ಸಮಸ್ಯೆಯನ್ನು  ಹೇಳಿದರು. ಅದಾದ ಮರುಕ್ಷಣವೇ ರೈಲ್ವೇ ಇಲಾಖೆಯಿಂದ  ಅವ್ಯಕ್ತ ಅವರು ಇರುವ ಬೋಗಿ ಹಾಗೂ ವಿವರ ಕೇಳಿ ಮೆಸೇಜ್ ಬಂತು. ಮುಂದೆ 15 ನಿಮಿಷದಲ್ಲಿ ಅವರ ಸಮಸ್ಯೆ ಪರಿಹಾರ ಕಂಡಿತು. ರೈಲ್ವೇ ಇಲಾಖೆ ಅಧಿಕಾರಿಗಳು ತಕ್ಷಣವೇ ಸ್ಪಂದನೆ ನೀಡಿದರು.

ಇದೊಂದೇ ಅಲ್ಲ, ಈ ಹಿಂದೆ ಅವ್ಯಕ್ತ ಅವರ ಲ್ಯಾಪ್ ಟಾಪ್ ರೈಲು ನಿಲ್ದಾಣದಲ್ಲಿ ಕಳವಾಗಿತ್ತು. ಈ ಸಂದಭದಲ್ಲಿ ತಕ್ಷಣವೇ ಟ್ವೀಟ್ ಮಾಡಿದ್ದರು. ಆಗಲೂ ಪಿಯೋಶ್ ಗೋಯಲ್ ಅವರ ಕಚೇರಿಯಿಂದ ಅಧಿಕಾರಿಗಳು ಹಾಗೂ ಸಿಬಂದಿಗಳು  ತಕ್ಷಣವೇ ಸ್ಪಂದನೆ ನೀಡಿ ಸಿಸಿ ಟಿವಿ ದೃಶ್ಯವನ್ನು ಕೂಡಾ ವೀಕ್ಷಣೆ ಮಾಡಿದ್ದರು. ಕಳ್ಳನ ಪತ್ತೆಗೆ ಸತತ ಪ್ರಯತ್ನ ಮಾಡಿದ್ದರು. ಇದೆಲ್ಲಾ ಕೇವಲ ಒಂದು ಟ್ವೀಟ್ ನಿಂದ. ಅದಕ್ಕಿಂತಲೂ ಮಿಗಿಲಾಗಿ ಒಂದು ಟ್ವೀಟ್ ಗೆ ಇಲಾಖೆಗಳು, ಸಚಿವರು ಸ್ಪಂದಿಸುವ ರೀತಿ ಖುಷಿಯಾಗಿದೆ ಎನ್ನುತ್ತಾರೆ ಅವ್ಯಕ್ತ. ಈ ದೇಶದಲ್ಲಿ ಜನಸಾಮಾನ್ಯನ ದೂರಿಗೆ, ಮನವಿಗೆ ಬೆಲೆ ಇದೆ ಎನ್ನುವುದು ಇಲ್ಲಿ  ತಿಳಿಯುತ್ತದೆ. ದೇಶದಲ್ಲಿ ಯಾರೂ ಅನಾಥರಾಗುವುದಿಲ್ಲ, ಎಲ್ಲರೂ ಟ್ವೀಟ್ ಮೂಲಕ ಇಲಾಖೆ ಜೊತೆ ಮಾತನಾಡಬಹುದು ಎಂಬುದಕ್ಕೆ ಇದೊಂದು ಸಾಕ್ಷಿ ಎನ್ನುತ್ತಾರೆ ಅವ್ಯಕ್ತ.

    ಅವ್ಯಕ್ತ  ಸುಳ್ಯದ ಬೀಗ್ರೋಸ್ ಮಾಲಕ. ಆರ್ ಕೆ ಭಟ್ ಸುಳ್ಯ ಅವರ ಪುತ್ರ.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

15 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

22 hours ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

23 hours ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago