Advertisement
Categories: Uncategorized

ಸುಳ್ಯದ ರೈಲ್ವೇ ಪ್ರಯಾಣಿಕನ ಟ್ವಿಟ್ಟರ್ ದೂರಿಗೆ ತಕ್ಷಣ ಸ್ಪಂದಿಸಿದ ರೈಲ್ವೇ ಇಲಾಖೆ

Share

ಸುಳ್ಯ: ಮುಂಬಯಿಯಿಂದ ರೈಲ್ವೇ ಪ್ರಯಾಣ ಬೆಳೆಸಿದ ಸುಳ್ಯದ ಅವ್ಯಕ್ತ ಅವರ ಟ್ವಿಟ್ಟರ್ ದೂರಿಗೆ ರೈಲ್ವೇ ಇಲಾಖೆ ತಕ್ಷಣವೇ ಸ್ಪಂದಿಸಿ ಕೇವಲ 15 ನಿಮಿಷದಲ್ಲಿ ಪರಿಹಾರ ದೊರಕಿದೆ.

ಅವ್ಯಕ್ತ ಅವರು ಮುಂಬಯಿಯಿಂದ ಸುಳ್ಯದ ನಗರಸಭಾ ಚುನಾವಣೆಗೆ ಮತದಾನಕ್ಕಾಗಿ ನಿನ್ನೆ ರಾತ್ರಿ ರೈಲಿನಲ್ಲಿ  ಹೊರಟಿದ್ದರು. ರೈಲಿನಲ್ಲಿ  ಮುಂಬಯಿಂದ ಏರಿದ ಅವರಿಗೆ ಸರಿಯಾದ ದಿಂಬಿನ ವ್ಯವಸ್ಥೆ ಇದ್ದಿರಲಿಲ್ಲ. ಈ ಬಗ್ಗೆ ವಿಚಾರಣೆಗೂ ಸರಿಯಾದ ಅವಕಾಶ ಇರಲಿಲ್ಲ. ಇದಕ್ಕಾಗಿ ತಕ್ಷಣವೇ   ಟ್ವೀಟ್  ಮೂಲಕ ಪಿಯೂಶ್ ಗೋಯಲ್ ಹಾಗೂ ರೈಲ್ವೇ ಇಲಾಖೆಗೆ ಟ್ಯಾಗ್ ಮಾಡಿ ತಮ್ಮ ಸಮಸ್ಯೆಯನ್ನು  ಹೇಳಿದರು. ಅದಾದ ಮರುಕ್ಷಣವೇ ರೈಲ್ವೇ ಇಲಾಖೆಯಿಂದ  ಅವ್ಯಕ್ತ ಅವರು ಇರುವ ಬೋಗಿ ಹಾಗೂ ವಿವರ ಕೇಳಿ ಮೆಸೇಜ್ ಬಂತು. ಮುಂದೆ 15 ನಿಮಿಷದಲ್ಲಿ ಅವರ ಸಮಸ್ಯೆ ಪರಿಹಾರ ಕಂಡಿತು. ರೈಲ್ವೇ ಇಲಾಖೆ ಅಧಿಕಾರಿಗಳು ತಕ್ಷಣವೇ ಸ್ಪಂದನೆ ನೀಡಿದರು.

ಇದೊಂದೇ ಅಲ್ಲ, ಈ ಹಿಂದೆ ಅವ್ಯಕ್ತ ಅವರ ಲ್ಯಾಪ್ ಟಾಪ್ ರೈಲು ನಿಲ್ದಾಣದಲ್ಲಿ ಕಳವಾಗಿತ್ತು. ಈ ಸಂದಭದಲ್ಲಿ ತಕ್ಷಣವೇ ಟ್ವೀಟ್ ಮಾಡಿದ್ದರು. ಆಗಲೂ ಪಿಯೋಶ್ ಗೋಯಲ್ ಅವರ ಕಚೇರಿಯಿಂದ ಅಧಿಕಾರಿಗಳು ಹಾಗೂ ಸಿಬಂದಿಗಳು  ತಕ್ಷಣವೇ ಸ್ಪಂದನೆ ನೀಡಿ ಸಿಸಿ ಟಿವಿ ದೃಶ್ಯವನ್ನು ಕೂಡಾ ವೀಕ್ಷಣೆ ಮಾಡಿದ್ದರು. ಕಳ್ಳನ ಪತ್ತೆಗೆ ಸತತ ಪ್ರಯತ್ನ ಮಾಡಿದ್ದರು. ಇದೆಲ್ಲಾ ಕೇವಲ ಒಂದು ಟ್ವೀಟ್ ನಿಂದ. ಅದಕ್ಕಿಂತಲೂ ಮಿಗಿಲಾಗಿ ಒಂದು ಟ್ವೀಟ್ ಗೆ ಇಲಾಖೆಗಳು, ಸಚಿವರು ಸ್ಪಂದಿಸುವ ರೀತಿ ಖುಷಿಯಾಗಿದೆ ಎನ್ನುತ್ತಾರೆ ಅವ್ಯಕ್ತ. ಈ ದೇಶದಲ್ಲಿ ಜನಸಾಮಾನ್ಯನ ದೂರಿಗೆ, ಮನವಿಗೆ ಬೆಲೆ ಇದೆ ಎನ್ನುವುದು ಇಲ್ಲಿ  ತಿಳಿಯುತ್ತದೆ. ದೇಶದಲ್ಲಿ ಯಾರೂ ಅನಾಥರಾಗುವುದಿಲ್ಲ, ಎಲ್ಲರೂ ಟ್ವೀಟ್ ಮೂಲಕ ಇಲಾಖೆ ಜೊತೆ ಮಾತನಾಡಬಹುದು ಎಂಬುದಕ್ಕೆ ಇದೊಂದು ಸಾಕ್ಷಿ ಎನ್ನುತ್ತಾರೆ ಅವ್ಯಕ್ತ.

    ಅವ್ಯಕ್ತ  ಸುಳ್ಯದ ಬೀಗ್ರೋಸ್ ಮಾಲಕ. ಆರ್ ಕೆ ಭಟ್ ಸುಳ್ಯ ಅವರ ಪುತ್ರ.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

8 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

8 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

13 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

14 hours ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

1 day ago