Advertisement
Categories: Uncategorized

ಸುಳ್ಯದ ರೈಲ್ವೇ ಪ್ರಯಾಣಿಕನ ಟ್ವಿಟ್ಟರ್ ದೂರಿಗೆ ತಕ್ಷಣ ಸ್ಪಂದಿಸಿದ ರೈಲ್ವೇ ಇಲಾಖೆ

Share

ಸುಳ್ಯ: ಮುಂಬಯಿಯಿಂದ ರೈಲ್ವೇ ಪ್ರಯಾಣ ಬೆಳೆಸಿದ ಸುಳ್ಯದ ಅವ್ಯಕ್ತ ಅವರ ಟ್ವಿಟ್ಟರ್ ದೂರಿಗೆ ರೈಲ್ವೇ ಇಲಾಖೆ ತಕ್ಷಣವೇ ಸ್ಪಂದಿಸಿ ಕೇವಲ 15 ನಿಮಿಷದಲ್ಲಿ ಪರಿಹಾರ ದೊರಕಿದೆ.

ಅವ್ಯಕ್ತ ಅವರು ಮುಂಬಯಿಯಿಂದ ಸುಳ್ಯದ ನಗರಸಭಾ ಚುನಾವಣೆಗೆ ಮತದಾನಕ್ಕಾಗಿ ನಿನ್ನೆ ರಾತ್ರಿ ರೈಲಿನಲ್ಲಿ  ಹೊರಟಿದ್ದರು. ರೈಲಿನಲ್ಲಿ  ಮುಂಬಯಿಂದ ಏರಿದ ಅವರಿಗೆ ಸರಿಯಾದ ದಿಂಬಿನ ವ್ಯವಸ್ಥೆ ಇದ್ದಿರಲಿಲ್ಲ. ಈ ಬಗ್ಗೆ ವಿಚಾರಣೆಗೂ ಸರಿಯಾದ ಅವಕಾಶ ಇರಲಿಲ್ಲ. ಇದಕ್ಕಾಗಿ ತಕ್ಷಣವೇ   ಟ್ವೀಟ್  ಮೂಲಕ ಪಿಯೂಶ್ ಗೋಯಲ್ ಹಾಗೂ ರೈಲ್ವೇ ಇಲಾಖೆಗೆ ಟ್ಯಾಗ್ ಮಾಡಿ ತಮ್ಮ ಸಮಸ್ಯೆಯನ್ನು  ಹೇಳಿದರು. ಅದಾದ ಮರುಕ್ಷಣವೇ ರೈಲ್ವೇ ಇಲಾಖೆಯಿಂದ  ಅವ್ಯಕ್ತ ಅವರು ಇರುವ ಬೋಗಿ ಹಾಗೂ ವಿವರ ಕೇಳಿ ಮೆಸೇಜ್ ಬಂತು. ಮುಂದೆ 15 ನಿಮಿಷದಲ್ಲಿ ಅವರ ಸಮಸ್ಯೆ ಪರಿಹಾರ ಕಂಡಿತು. ರೈಲ್ವೇ ಇಲಾಖೆ ಅಧಿಕಾರಿಗಳು ತಕ್ಷಣವೇ ಸ್ಪಂದನೆ ನೀಡಿದರು.

ಇದೊಂದೇ ಅಲ್ಲ, ಈ ಹಿಂದೆ ಅವ್ಯಕ್ತ ಅವರ ಲ್ಯಾಪ್ ಟಾಪ್ ರೈಲು ನಿಲ್ದಾಣದಲ್ಲಿ ಕಳವಾಗಿತ್ತು. ಈ ಸಂದಭದಲ್ಲಿ ತಕ್ಷಣವೇ ಟ್ವೀಟ್ ಮಾಡಿದ್ದರು. ಆಗಲೂ ಪಿಯೋಶ್ ಗೋಯಲ್ ಅವರ ಕಚೇರಿಯಿಂದ ಅಧಿಕಾರಿಗಳು ಹಾಗೂ ಸಿಬಂದಿಗಳು  ತಕ್ಷಣವೇ ಸ್ಪಂದನೆ ನೀಡಿ ಸಿಸಿ ಟಿವಿ ದೃಶ್ಯವನ್ನು ಕೂಡಾ ವೀಕ್ಷಣೆ ಮಾಡಿದ್ದರು. ಕಳ್ಳನ ಪತ್ತೆಗೆ ಸತತ ಪ್ರಯತ್ನ ಮಾಡಿದ್ದರು. ಇದೆಲ್ಲಾ ಕೇವಲ ಒಂದು ಟ್ವೀಟ್ ನಿಂದ. ಅದಕ್ಕಿಂತಲೂ ಮಿಗಿಲಾಗಿ ಒಂದು ಟ್ವೀಟ್ ಗೆ ಇಲಾಖೆಗಳು, ಸಚಿವರು ಸ್ಪಂದಿಸುವ ರೀತಿ ಖುಷಿಯಾಗಿದೆ ಎನ್ನುತ್ತಾರೆ ಅವ್ಯಕ್ತ. ಈ ದೇಶದಲ್ಲಿ ಜನಸಾಮಾನ್ಯನ ದೂರಿಗೆ, ಮನವಿಗೆ ಬೆಲೆ ಇದೆ ಎನ್ನುವುದು ಇಲ್ಲಿ  ತಿಳಿಯುತ್ತದೆ. ದೇಶದಲ್ಲಿ ಯಾರೂ ಅನಾಥರಾಗುವುದಿಲ್ಲ, ಎಲ್ಲರೂ ಟ್ವೀಟ್ ಮೂಲಕ ಇಲಾಖೆ ಜೊತೆ ಮಾತನಾಡಬಹುದು ಎಂಬುದಕ್ಕೆ ಇದೊಂದು ಸಾಕ್ಷಿ ಎನ್ನುತ್ತಾರೆ ಅವ್ಯಕ್ತ.

    ಅವ್ಯಕ್ತ  ಸುಳ್ಯದ ಬೀಗ್ರೋಸ್ ಮಾಲಕ. ಆರ್ ಕೆ ಭಟ್ ಸುಳ್ಯ ಅವರ ಪುತ್ರ.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

6 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

6 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

6 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

16 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

17 hours ago