Advertisement
The Rural Mirror ಫಾಲೋಅಪ್

ಸುಳ್ಯ ಲಂಚಾವತಾರ: ಸುಳ್ಯದ ಸಬ್ ರಿಜಿಸ್ಟ್ರಾರ್ ಬದಲಾವಣೆ

Share

ಸುಳ್ಯ: ಸುಳ್ಯದ ಸಬ್ ರಿಜಿಸ್ಟ್ರಾರ್ ಕಚೇರಿಯ ಅಧಿಕಾರಿ ಕೇಶವಮೂರ್ತಿ ಹಲವಾರು ಸಮಯಗಳಿಂದ ಲಂಚ , ಭ್ರಷ್ಟಾಚಾರದಲ್ಲಿ  ತೊಡಗಿಕೊಂಡಿದ್ದರೂ ಯಾವುದೇ ಕ್ರಮ ಆಗದ ಹಿನ್ನೆಲೆಯಲ್ಲಿ  ಸುಳ್ಯನ್ಯೂಸ್.ಕಾಂ ವಿಡಿಯೋ ಸಹಿತ ವರದಿ ಮಾಡಿತ್ತು. ಅದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ  ಸುಳ್ಯಕ್ಕೆ ಮಂಗಳೂರಿನಿಂದ ಸುಧೀಂದ್ರ ಎಂಬವರು ಅಧಿಕಾರ ಪಡೆದಿದ್ದಾರೆ.

ಸುಳ್ಯದಲ್ಲಿ ಸಬ್ ರಿಜಿಸ್ಟ್ರಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಂಟ್ವಾಳ ಸಬ್ ರಿಜಿಸ್ಟ್ರಾರ್ ಕಚೇರಿಯ ದ್ವಿತೀಯ ದರ್ಜೆಯ ಸಹಾಯಕ ಕೇಶವಮೂರ್ತಿ ಅವರು ಸುಳ್ಯದಲ್ಲಿ  ಜನಸಾಮಾನ್ಯರಿಂದ ತೊಡಗಿ ಯೋಧರೊಬ್ಬರಿಂದಲೂ ಇ ಸಿ ಗೆ ಹಣ ಪಡೆದಿದ್ದ ಬಗ್ಗೆ ಆರೋಪ ಇತ್ತು. ಈ ಬಗ್ಗೆ ಸಾರ್ವಜನಿಕರು ಹಲವು ಬಾರಿ ಮಾತನಾಡಿದ್ದರೂ ಯಾವುದೇ ಕ್ರಮ ಆಗಿರಲಿಲ್ಲ. ಇದರಿಂದ ರೋಸಿ ಹೋಗಿದ್ದ ವ್ಯವಸ್ಥೆ ಬಗ್ಗೆ ಕೃಷಿರೊಬ್ಬರು ಸುಳ್ಯನ್ಯೂಸ್.ಕಾಂ ಮಾಹಿತಿ ನೀಡಿದ್ದರು. ಹೀಗಾಗಿ ವಿಡಿಯೋ ಸಹಿತ ವರದಿ ಮಾಡಿತ್ತು. ಅದಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ ಮಾಧ್ಯಮಗಳಲ್ಲಿ  ಮತ್ತು ಆನ್ಲೈನ್ ಮಾಧ್ಯಮಗಳಲ್ಲಿ ಪತ್ರಿಕೆಗಳಲ್ಲಿ ವರದಿಯಾಗಿತ್ತು. 

ಈ ಬಗ್ಗೆ ಶಾಸಕ ಅಂಗಾರ , ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಸೇರಿದಂತೆ ಜನಪ್ರತಿನಿಧಿಗಳು, ಸಾಮಾಜಿಕ ಸಂಘಟನೆಗಳು ಅಧಿಕಾರಿ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯ ಮಾಡಿದ್ದರು. ಸದ್ಯ ಕೇಶವ ಮೂರ್ತಿ ಬಂಟ್ವಾಳದಲ್ಲಿ  ಕೆಲಸ ನಡೆಸುತ್ತಿದ್ದು ಕಡ್ಡಾಯ ರಜೆಯ ಮೂಲಕ ತೆರಳಲು ಆದೇಶದ ಸೂಚನೆ ಇದೆ. ಈ ನಡುವೆ ಭ್ರಷ್ಟಾಚಾರ ನಿಗ್ರಹ ದಳ ಕೇಸು ದಾಖಲಿಸಿಕೊಳ್ಳಲಿದೆ.

ಸುಳ್ಯದಲ್ಲಿ ಇನ್ನೂ ಹಲವು ಇಲಾಖೆಗಳಲ್ಲಿ  ಭ್ರಷ್ಟಾಚಾರ ನಡೆಯುತ್ತಿದೆ ಆರೋಪ ಇದೆ. ಲಂಚ ನೀಡದೆ ಕಡತಗಳು ಮುಂದುವರಿಯುವುದಿಲ್ಲ, ಹಾಗೂ ಸತಾಯಿಸಲಾಗುತ್ತಿದೆ ಎಂಬ ಆರೋಪ  ಇದೆ.  ಈ ಬಗ್ಗೆ ಕೃಷಿಕರು, ಸಾರ್ವಜನಿಕರು ಎಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

1 day ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

1 day ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

1 day ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

2 days ago