Advertisement
The Rural Mirror ಫಾಲೋಅಪ್

ಸುಳ್ಯ ಲಂಚಾವತಾರ: ಸುಳ್ಯದ ಸಬ್ ರಿಜಿಸ್ಟ್ರಾರ್ ಬದಲಾವಣೆ

Share

ಸುಳ್ಯ: ಸುಳ್ಯದ ಸಬ್ ರಿಜಿಸ್ಟ್ರಾರ್ ಕಚೇರಿಯ ಅಧಿಕಾರಿ ಕೇಶವಮೂರ್ತಿ ಹಲವಾರು ಸಮಯಗಳಿಂದ ಲಂಚ , ಭ್ರಷ್ಟಾಚಾರದಲ್ಲಿ  ತೊಡಗಿಕೊಂಡಿದ್ದರೂ ಯಾವುದೇ ಕ್ರಮ ಆಗದ ಹಿನ್ನೆಲೆಯಲ್ಲಿ  ಸುಳ್ಯನ್ಯೂಸ್.ಕಾಂ ವಿಡಿಯೋ ಸಹಿತ ವರದಿ ಮಾಡಿತ್ತು. ಅದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ  ಸುಳ್ಯಕ್ಕೆ ಮಂಗಳೂರಿನಿಂದ ಸುಧೀಂದ್ರ ಎಂಬವರು ಅಧಿಕಾರ ಪಡೆದಿದ್ದಾರೆ.

ಸುಳ್ಯದಲ್ಲಿ ಸಬ್ ರಿಜಿಸ್ಟ್ರಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಂಟ್ವಾಳ ಸಬ್ ರಿಜಿಸ್ಟ್ರಾರ್ ಕಚೇರಿಯ ದ್ವಿತೀಯ ದರ್ಜೆಯ ಸಹಾಯಕ ಕೇಶವಮೂರ್ತಿ ಅವರು ಸುಳ್ಯದಲ್ಲಿ  ಜನಸಾಮಾನ್ಯರಿಂದ ತೊಡಗಿ ಯೋಧರೊಬ್ಬರಿಂದಲೂ ಇ ಸಿ ಗೆ ಹಣ ಪಡೆದಿದ್ದ ಬಗ್ಗೆ ಆರೋಪ ಇತ್ತು. ಈ ಬಗ್ಗೆ ಸಾರ್ವಜನಿಕರು ಹಲವು ಬಾರಿ ಮಾತನಾಡಿದ್ದರೂ ಯಾವುದೇ ಕ್ರಮ ಆಗಿರಲಿಲ್ಲ. ಇದರಿಂದ ರೋಸಿ ಹೋಗಿದ್ದ ವ್ಯವಸ್ಥೆ ಬಗ್ಗೆ ಕೃಷಿರೊಬ್ಬರು ಸುಳ್ಯನ್ಯೂಸ್.ಕಾಂ ಮಾಹಿತಿ ನೀಡಿದ್ದರು. ಹೀಗಾಗಿ ವಿಡಿಯೋ ಸಹಿತ ವರದಿ ಮಾಡಿತ್ತು. ಅದಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ ಮಾಧ್ಯಮಗಳಲ್ಲಿ  ಮತ್ತು ಆನ್ಲೈನ್ ಮಾಧ್ಯಮಗಳಲ್ಲಿ ಪತ್ರಿಕೆಗಳಲ್ಲಿ ವರದಿಯಾಗಿತ್ತು. 

ಈ ಬಗ್ಗೆ ಶಾಸಕ ಅಂಗಾರ , ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಸೇರಿದಂತೆ ಜನಪ್ರತಿನಿಧಿಗಳು, ಸಾಮಾಜಿಕ ಸಂಘಟನೆಗಳು ಅಧಿಕಾರಿ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯ ಮಾಡಿದ್ದರು. ಸದ್ಯ ಕೇಶವ ಮೂರ್ತಿ ಬಂಟ್ವಾಳದಲ್ಲಿ  ಕೆಲಸ ನಡೆಸುತ್ತಿದ್ದು ಕಡ್ಡಾಯ ರಜೆಯ ಮೂಲಕ ತೆರಳಲು ಆದೇಶದ ಸೂಚನೆ ಇದೆ. ಈ ನಡುವೆ ಭ್ರಷ್ಟಾಚಾರ ನಿಗ್ರಹ ದಳ ಕೇಸು ದಾಖಲಿಸಿಕೊಳ್ಳಲಿದೆ.

ಸುಳ್ಯದಲ್ಲಿ ಇನ್ನೂ ಹಲವು ಇಲಾಖೆಗಳಲ್ಲಿ  ಭ್ರಷ್ಟಾಚಾರ ನಡೆಯುತ್ತಿದೆ ಆರೋಪ ಇದೆ. ಲಂಚ ನೀಡದೆ ಕಡತಗಳು ಮುಂದುವರಿಯುವುದಿಲ್ಲ, ಹಾಗೂ ಸತಾಯಿಸಲಾಗುತ್ತಿದೆ ಎಂಬ ಆರೋಪ  ಇದೆ.  ಈ ಬಗ್ಗೆ ಕೃಷಿಕರು, ಸಾರ್ವಜನಿಕರು ಎಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಬಹುದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

11 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

11 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

19 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago