Advertisement
The Rural Mirror ಫಾಲೋಅಪ್

ಸುಳ್ಯ ಲಂಚಾವತಾರ: ಸುಳ್ಯದ ಸಬ್ ರಿಜಿಸ್ಟ್ರಾರ್ ಬದಲಾವಣೆ

Share

ಸುಳ್ಯ: ಸುಳ್ಯದ ಸಬ್ ರಿಜಿಸ್ಟ್ರಾರ್ ಕಚೇರಿಯ ಅಧಿಕಾರಿ ಕೇಶವಮೂರ್ತಿ ಹಲವಾರು ಸಮಯಗಳಿಂದ ಲಂಚ , ಭ್ರಷ್ಟಾಚಾರದಲ್ಲಿ  ತೊಡಗಿಕೊಂಡಿದ್ದರೂ ಯಾವುದೇ ಕ್ರಮ ಆಗದ ಹಿನ್ನೆಲೆಯಲ್ಲಿ  ಸುಳ್ಯನ್ಯೂಸ್.ಕಾಂ ವಿಡಿಯೋ ಸಹಿತ ವರದಿ ಮಾಡಿತ್ತು. ಅದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ  ಸುಳ್ಯಕ್ಕೆ ಮಂಗಳೂರಿನಿಂದ ಸುಧೀಂದ್ರ ಎಂಬವರು ಅಧಿಕಾರ ಪಡೆದಿದ್ದಾರೆ.

ಸುಳ್ಯದಲ್ಲಿ ಸಬ್ ರಿಜಿಸ್ಟ್ರಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಂಟ್ವಾಳ ಸಬ್ ರಿಜಿಸ್ಟ್ರಾರ್ ಕಚೇರಿಯ ದ್ವಿತೀಯ ದರ್ಜೆಯ ಸಹಾಯಕ ಕೇಶವಮೂರ್ತಿ ಅವರು ಸುಳ್ಯದಲ್ಲಿ  ಜನಸಾಮಾನ್ಯರಿಂದ ತೊಡಗಿ ಯೋಧರೊಬ್ಬರಿಂದಲೂ ಇ ಸಿ ಗೆ ಹಣ ಪಡೆದಿದ್ದ ಬಗ್ಗೆ ಆರೋಪ ಇತ್ತು. ಈ ಬಗ್ಗೆ ಸಾರ್ವಜನಿಕರು ಹಲವು ಬಾರಿ ಮಾತನಾಡಿದ್ದರೂ ಯಾವುದೇ ಕ್ರಮ ಆಗಿರಲಿಲ್ಲ. ಇದರಿಂದ ರೋಸಿ ಹೋಗಿದ್ದ ವ್ಯವಸ್ಥೆ ಬಗ್ಗೆ ಕೃಷಿರೊಬ್ಬರು ಸುಳ್ಯನ್ಯೂಸ್.ಕಾಂ ಮಾಹಿತಿ ನೀಡಿದ್ದರು. ಹೀಗಾಗಿ ವಿಡಿಯೋ ಸಹಿತ ವರದಿ ಮಾಡಿತ್ತು. ಅದಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ ಮಾಧ್ಯಮಗಳಲ್ಲಿ  ಮತ್ತು ಆನ್ಲೈನ್ ಮಾಧ್ಯಮಗಳಲ್ಲಿ ಪತ್ರಿಕೆಗಳಲ್ಲಿ ವರದಿಯಾಗಿತ್ತು. 

ಈ ಬಗ್ಗೆ ಶಾಸಕ ಅಂಗಾರ , ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಸೇರಿದಂತೆ ಜನಪ್ರತಿನಿಧಿಗಳು, ಸಾಮಾಜಿಕ ಸಂಘಟನೆಗಳು ಅಧಿಕಾರಿ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯ ಮಾಡಿದ್ದರು. ಸದ್ಯ ಕೇಶವ ಮೂರ್ತಿ ಬಂಟ್ವಾಳದಲ್ಲಿ  ಕೆಲಸ ನಡೆಸುತ್ತಿದ್ದು ಕಡ್ಡಾಯ ರಜೆಯ ಮೂಲಕ ತೆರಳಲು ಆದೇಶದ ಸೂಚನೆ ಇದೆ. ಈ ನಡುವೆ ಭ್ರಷ್ಟಾಚಾರ ನಿಗ್ರಹ ದಳ ಕೇಸು ದಾಖಲಿಸಿಕೊಳ್ಳಲಿದೆ.

ಸುಳ್ಯದಲ್ಲಿ ಇನ್ನೂ ಹಲವು ಇಲಾಖೆಗಳಲ್ಲಿ  ಭ್ರಷ್ಟಾಚಾರ ನಡೆಯುತ್ತಿದೆ ಆರೋಪ ಇದೆ. ಲಂಚ ನೀಡದೆ ಕಡತಗಳು ಮುಂದುವರಿಯುವುದಿಲ್ಲ, ಹಾಗೂ ಸತಾಯಿಸಲಾಗುತ್ತಿದೆ ಎಂಬ ಆರೋಪ  ಇದೆ.  ಈ ಬಗ್ಗೆ ಕೃಷಿಕರು, ಸಾರ್ವಜನಿಕರು ಎಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

3 minutes ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

7 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

9 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

18 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

18 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

18 hours ago