Advertisement
The Rural Mirror ಫಾಲೋಅಪ್

ಸುಳ್ಯ ಲಂಚಾವತಾರ: ಸುಳ್ಯದ ಸಬ್ ರಿಜಿಸ್ಟ್ರಾರ್ ಬದಲಾವಣೆ

Share

ಸುಳ್ಯ: ಸುಳ್ಯದ ಸಬ್ ರಿಜಿಸ್ಟ್ರಾರ್ ಕಚೇರಿಯ ಅಧಿಕಾರಿ ಕೇಶವಮೂರ್ತಿ ಹಲವಾರು ಸಮಯಗಳಿಂದ ಲಂಚ , ಭ್ರಷ್ಟಾಚಾರದಲ್ಲಿ  ತೊಡಗಿಕೊಂಡಿದ್ದರೂ ಯಾವುದೇ ಕ್ರಮ ಆಗದ ಹಿನ್ನೆಲೆಯಲ್ಲಿ  ಸುಳ್ಯನ್ಯೂಸ್.ಕಾಂ ವಿಡಿಯೋ ಸಹಿತ ವರದಿ ಮಾಡಿತ್ತು. ಅದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ  ಸುಳ್ಯಕ್ಕೆ ಮಂಗಳೂರಿನಿಂದ ಸುಧೀಂದ್ರ ಎಂಬವರು ಅಧಿಕಾರ ಪಡೆದಿದ್ದಾರೆ.

Advertisement
Advertisement

ಸುಳ್ಯದಲ್ಲಿ ಸಬ್ ರಿಜಿಸ್ಟ್ರಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಂಟ್ವಾಳ ಸಬ್ ರಿಜಿಸ್ಟ್ರಾರ್ ಕಚೇರಿಯ ದ್ವಿತೀಯ ದರ್ಜೆಯ ಸಹಾಯಕ ಕೇಶವಮೂರ್ತಿ ಅವರು ಸುಳ್ಯದಲ್ಲಿ  ಜನಸಾಮಾನ್ಯರಿಂದ ತೊಡಗಿ ಯೋಧರೊಬ್ಬರಿಂದಲೂ ಇ ಸಿ ಗೆ ಹಣ ಪಡೆದಿದ್ದ ಬಗ್ಗೆ ಆರೋಪ ಇತ್ತು. ಈ ಬಗ್ಗೆ ಸಾರ್ವಜನಿಕರು ಹಲವು ಬಾರಿ ಮಾತನಾಡಿದ್ದರೂ ಯಾವುದೇ ಕ್ರಮ ಆಗಿರಲಿಲ್ಲ. ಇದರಿಂದ ರೋಸಿ ಹೋಗಿದ್ದ ವ್ಯವಸ್ಥೆ ಬಗ್ಗೆ ಕೃಷಿರೊಬ್ಬರು ಸುಳ್ಯನ್ಯೂಸ್.ಕಾಂ ಮಾಹಿತಿ ನೀಡಿದ್ದರು. ಹೀಗಾಗಿ ವಿಡಿಯೋ ಸಹಿತ ವರದಿ ಮಾಡಿತ್ತು. ಅದಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ ಮಾಧ್ಯಮಗಳಲ್ಲಿ  ಮತ್ತು ಆನ್ಲೈನ್ ಮಾಧ್ಯಮಗಳಲ್ಲಿ ಪತ್ರಿಕೆಗಳಲ್ಲಿ ವರದಿಯಾಗಿತ್ತು. 

Advertisement

ಈ ಬಗ್ಗೆ ಶಾಸಕ ಅಂಗಾರ , ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಸೇರಿದಂತೆ ಜನಪ್ರತಿನಿಧಿಗಳು, ಸಾಮಾಜಿಕ ಸಂಘಟನೆಗಳು ಅಧಿಕಾರಿ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯ ಮಾಡಿದ್ದರು. ಸದ್ಯ ಕೇಶವ ಮೂರ್ತಿ ಬಂಟ್ವಾಳದಲ್ಲಿ  ಕೆಲಸ ನಡೆಸುತ್ತಿದ್ದು ಕಡ್ಡಾಯ ರಜೆಯ ಮೂಲಕ ತೆರಳಲು ಆದೇಶದ ಸೂಚನೆ ಇದೆ. ಈ ನಡುವೆ ಭ್ರಷ್ಟಾಚಾರ ನಿಗ್ರಹ ದಳ ಕೇಸು ದಾಖಲಿಸಿಕೊಳ್ಳಲಿದೆ.

ಸುಳ್ಯದಲ್ಲಿ ಇನ್ನೂ ಹಲವು ಇಲಾಖೆಗಳಲ್ಲಿ  ಭ್ರಷ್ಟಾಚಾರ ನಡೆಯುತ್ತಿದೆ ಆರೋಪ ಇದೆ. ಲಂಚ ನೀಡದೆ ಕಡತಗಳು ಮುಂದುವರಿಯುವುದಿಲ್ಲ, ಹಾಗೂ ಸತಾಯಿಸಲಾಗುತ್ತಿದೆ ಎಂಬ ಆರೋಪ  ಇದೆ.  ಈ ಬಗ್ಗೆ ಕೃಷಿಕರು, ಸಾರ್ವಜನಿಕರು ಎಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಬಹುದಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

1 hour ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

10 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago