ಮಂಗಳೂರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನದಲ್ಲಿ ಸುಳ್ಯದ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿಯವರನ್ನು ಸನ್ಮಾನಿಸಲಾಯಿತು.
ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದು 30 ವರ್ಷಕ್ಕಿಂತಲೂ ಹೆಚ್ಚು ಸಮಯ ಪತ್ರಿಕಾ ಕ್ಷೇತ್ರದಲ್ಲಿ ದುಡಿದ ಜಿಲ್ಲೆಯ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಯಿತು.
ಗ್ರಾಮೀಣ ಪ್ರದೇಶದಲ್ಲಿ 35 ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಪತ್ರಕರ್ತರಾಗಿರುವ ಮಟ್ಟಿಯವರು ಉದಯವಾಣಿ, ಹೊಸದಿಗಂತ, ಸಂಯುಕ್ತ ಕರ್ನಾಟಕ, ಮುಂಗಾರು ಸೇರಿದಂತೆ ಹಲವು ಪತ್ರಿಕೆಗಳಲ್ಲಿ ವರದಿಗಾರರಾಗಿ ದುಡಿದಿದ್ದಾರೆ. ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ ಸಂಘಟನೆಗಳಲ್ಲೂ ಮಟ್ಟಿಯವರು ಸಕ್ರೀಯರಾಗಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…