Advertisement
MIRROR FOCUS

ಸುಳ್ಯ-ಅಜ್ಜಾವರ ರಸ್ತೆ ಅಭಿವೃದ್ಧಿ ಅಂತಿಮ ಹಂತದಲ್ಲಿ

Share

ಸುಳ್ಯ: ರಾಜಕೀಯ ವಿವಾದ ಸೃಷ್ಠಿಸಿದ್ದ, ಪ್ರತಿಭಟನೆ, ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ ಕಾಂತಮಂಗಲ-ಅಜ್ಜಾವರ ರಸ್ತೆ ಅಭಿವೃದ್ಧಿ ಪೂರ್ತಿಯಾಗುತ್ತಿದೆ. ಕೇಂದ್ರ ರಸ್ತೆ ನಿಧಿ ಅನುದಾನದಲ್ಲಿ ಆರು ಕೋಟಿ ರೂ ವೆಚ್ಚದಲ್ಲಿ ಸುಳ್ಯ-ಅಜ್ಜಾವರ-ಮಂಡೆಕೋಲು-ಅಡೂರು ಅಂತಾರಾಜ್ಯ ರಸ್ತೆಯಲ್ಲಿ ಕಾಂತಮಂಗಲದಿಂದ ಅಜ್ಜಾವರದ ಅಡ್ಪಂಗಾಯದವರೆಗೆ ಆರು ಕಿ.ಮಿ. ಅಭಿವೃದ್ಧಿ ನಡೆಯುತಿದೆ. ಇದರಲ್ಲಿ 4.5 ಕಿ.ಮಿ.ರಸ್ತೆ ಡಾಮರೀಕರಣ ಪೂರ್ತಿಯಾಗಿದೆ. ಉಳಿದ ಸುಮಾರು ಒಂದೂವರೆ ಕಿ.ಮಿ ರಸ್ತೆಯಲ್ಲಿ ಜಲ್ಲಿ ಹಾಸುವ ಕೆಲಸ ಪೂರ್ತಿಯಾಗಿದೆ. ರಸ್ತೆ ಕಾಮಗಾರಿ ಅಂತಿಮ ಹಂತದಲ್ಲಿದ್ದು ಡಾಮರೀಕರಣ ಕೆಲಸ ಸದ್ಯದಲ್ಲಿಯೇ ಪೂರ್ತಿಯಾಗಲಿದೆ ಎಂದು ಇಂಜಿನಿಯರ್‍ಗಳು ತಿಳಿಸಿದ್ದಾರೆ. 5.5 ಮೀಟರ್ ಅಗಲದಲ್ಲಿ ರಸ್ತೆ ಡಾಮರೀಕರಣ ಮಾಡಲಾಗಿದೆ. ಅಗಲೀಕರಣ ಮಾಡಿ ಅಲ್ಲಲ್ಲಿ ಕಿರು ಸೇತುವೆ, ಮೋರಿಗಳ ನಿರ್ಮಾಣವೂ ನಡೆದಿದೆ. ಡಾಮರು ಕಂಡು ದಶಕಗಳೇ ಕಳೆದು ಸಂಪೂರ್ಣ ಎಕ್ಕುಟ್ಟಿ ಹೋಗಿದ್ದ ರಸ್ತೆಯಲ್ಲಿನ ಪ್ರಯಾಣ ದೇವರಿಗೇ ಪ್ರೀತಿ ಎಂಬ ಸ್ಥಿತಿ ಇತ್ತು. ಕಳೆದ ಬೇಸಿಗೆಯಲ್ಲಿ ಕಾಮಗಾರಿ ಆರಂಭಿಸಿ ಮಳೆಗಾಲಕ್ಕೆ ಮುನ್ನ ಸ್ವಲ್ಪ ಭಾಗ ಅಭಿವೃದ್ಧಿಸಿ ಡಾಮರೀಕರಣ ನಡೆಸಲಾಗಿತ್ತು. ಮಳೆಗಾಲ ಕಳೆದ ಬಳಿಕ ಕಾಮಗಾರಿ ಮತ್ತೆ ಆರಂಭಿಸಲಾಗಿತ್ತು.

ದಶಕದ ಯಾತನೆಗೆ ಮುಕ್ತಿ: ಸುಳ್ಯ ಅಜ್ಜಾವರ ಮಧ್ಯೆಯ ಆರೂವರೆ ಕಿ.ಮಿ.ರಸ್ತೆ ಅಭಿವೃದ್ಧಿ ಕಾಣದೆ ದಶಕಗಳೇ ಕಳೆದು ಹೋಗಿತ್ತು. ಇದೀಗ ರಸ್ತೆ ಅಭಿವೃದ್ಧಿ ಕಂಡಿರುವುದರಿಂದ ದಶಕದ ಯಾತನೆಗೆ ಮುಕ್ತಿ ದೊರೆಯುವಂತಾಗಿದೆ. ಕಾಂತಮಂಗಲ ವೃತ್ತದಿಂದ ಅಡ್ಪಂಗಾಯದವರೆಗೆ ಒಟ್ಟು ಏಳೂವರೆ ಕಿ.ಮಿ.ಜಿಲ್ಲಾ ಪಂಚಾಯಿತಿ ರಸ್ತೆಯಲ್ಲಿ ಆರೂವರೆ ಕಿ.ಮಿ. ಸಂಪೂರ್ಣ ಎಕ್ಕುಟ್ಟಿ ಹೋಗಿ ಪ್ರಯಾಣ ದುಸ್ತರವಾಗಿತ್ತು. ಸುಳ್ಯ-ಅಜ್ಜಾವರ-ಮಂಡೆಕೋಲು-ಅಡೂರು ಅಂತಾರಾಜ್ಯ ರಸ್ತೆಯಲ್ಲಿ ಸುಳ್ಯದಿಂದ ಮಂಡೆಕೋಲು ಗಡಿವರೆಗೆ ಕರ್ನಾಟಕದ ಭಾಗ ಒಟ್ಟು 14 ಕಿ.ಮಿ. ರಸ್ತೆ ಇದೆ. ಇದರಲ್ಲಿ ಅಡ್ಪಂಗಾಯದಿಂದ ಮಂಡೆಕೋಲು ಪೇಟೆವರೆಗೆ ಮೂರು ಕಿ.ಮಿ.ಲೋಕೋಪಯೋಗಿ ರಸ್ತೆ ಹೊರತುಪಡಿಸಿದರೆ ಉಳಿದ 11 ಕಿ.ಮಿ.ಜಿಲ್ಲಾ ಪಂಚಾಯಿತಿ ರಸ್ತೆ ಇದೆ. ಇದರಲ್ಲಿ ನಾಲ್ಕು ಕೋಟಿ ರೂ ಅನುದಾನದಲ್ಲಿ ನಾಲ್ಕೂವರೆ ಕಿ.ಮಿ. ಕೆಲವು ವರ್ಷಗಳ ಹಿಂದೆ ಅಭಿವೃದ್ದಿಗೊಂಡಿತ್ತು. ಕಾಂತಮಂಗಲ ಹಾಗು ಅಜ್ಜಾವರಗಳಲ್ಲಿ ಒಟ್ಟು ಒಂದು ಕಿ.ಮಿ.ಕಾಂಕ್ರೀಟೀಕರಣ ಮತ್ತು ಮಂಡೆಕೋಲು ಪೇಟೆಯಿಂದ ಗಡಿಯವರೆಗೆ 3.5 ಕಿ.ಮಿ.ಡಾಮರೀಕರಣ ಮಾಡಿ ರಸ್ತೆ ಅಭಿವೃದ್ಧಿಪಡಿಸಲಾಗಿದೆ. ಕಾಂತಮಂಗಲ-ಅಜ್ಜಾವರ ಮಧ್ಯೆ ಉಳಿದ ಆರೂವರೆ ಕಿ.ಮಿ. ರಸ್ತೆ ಡಾಮರೀಕರಣ ಕಾಣದೇ ಒಂದೂವರೆ ದಶಕ ಸಂದಿತ್ತು.

ಕಾಂತಮಂಗಲ-ಅಜ್ಜಾವರ ರಸ್ತೆ ಅಭಿವೃದ್ಧಿಗೆ ಕೇಂದ್ರ ರಸ್ತೆ ನಿಧಿಯಿಂದ ಆರು ಕೋಟಿ ರೂ ಅನುದಾನ ನಾಲ್ಕು ವರ್ಷದ ಹಿಂದೆಯೇ ಮಂಜೂರುಗೊಂಡಿತ್ತು. ಆದರೆ ಈ ಅನುದಾನದ ಟೆಂಡರ್ ಪ್ರಕ್ರಿಯೆ ನಡೆಯದೆ ಕಾಮಗಾರಿ ಆರಂಭಿಸಲು ವಿಳಂಬ ಆಗಿ ಭಾರೀ ವಿವಾದಕ್ಕೆ ಮತ್ತು ರಾಜಕೀಯ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು. ನಿರಂತರ ಒತ್ತಡ ಮತ್ತು ಪ್ರತಿಭಟನೆಯ ಬಳಿಕ ರಸ್ತೆ ಕಾಮಗಾರಿ ಆರಂಭಗೊಂಡಿತ್ತು.

ಕೇಂದ್ರ ರಸ್ತೆ ನಿಧಿಯಿಂದ ಕಾಂತಮಂಗಲ-ಅಜ್ಜಾವರ ರಸ್ತೆ ಅಭಿವೃದ್ಧಿ ನಡೆಯುತಿದ್ದು ಅಂತಿಮ ಹಂತದಲ್ಲಿದೆ. ಕಾಮಗಾರಿ ಆರಂಭಗೊಳ್ಳುವುದು ವಿಳಂಬವಾಗಿದ್ದರೂ ಇದೀಗ ಅತ್ಯುತ್ತಮ ರಸ್ತೆ ನಿರ್ಮಾಣಗೊಂಡಿದೆ. ರಸ್ತೆ ಅಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಿದ ಕಾರಣ ಸುಂದರ ರಸ್ತೆ ನಿರ್ಮಾಣಗೊಂಡಿದೆ-ನವೀನ್‍ಕುಮಾರ್ ಮೇನಾಲ, ಮಾಜಿ ಸದಸ್ಯ, ದ.ಕ.ಜಿಲ್ಲಾ ಪಂಚಾಯಿತಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

2 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

10 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

11 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

18 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

21 hours ago