ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರು ಯಾರು ? ಅಥವಾ ಸುಳ್ಯ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬರುತ್ತದಾ ? …ಹೀಗೊಂದು ಪ್ರಶ್ನೆ ಈಗ ಕಲ್ಮಡ್ಕ ಪರಿಸರದಲ್ಲಿ ಕೇಳಿದೆ.
ಕಾರಣ ಇಷ್ಟೇ, ಇಲ್ಲಿ ಪಾಜಪಳ್ಳ -ಕುಕ್ಕುಜಡ್ಕ ರಸ್ತೆ ಅಭಿವೃದ್ದಿಯನ್ನು ಈಚೆಗೆ ಮಾಡಲಾಗಿದೆ. 5.80 ಕಿಮೀ ಉದ್ದದ ರಸ್ತೆಯನ್ನು 1.96 ಕೋಟಿ ರೂಪಾಯಿಯಲ್ಲಿ ಅಭಿವೃದ್ಧಿ ಮಾಡಲಾಗಿದೆ. ಇದಕ್ಕೆ ಮಾಹಿತಿ ನೀಡುವ ಸಲುವಾಗಿ ಫಲಕ ಹಾಕಲಾಗುತ್ತದೆ. ಇದರಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಹೆಸರು ಉಲ್ಲೇಖಿಸಲಾಗಿದೆ.
ಕಣ್ತಪ್ಪಿನಿಂದ ಈ ಲೋಪವಾಗಿರಬಹುದು. ಆದರೆ ಕೋಟಿ ಅನುದಾನದ ಮಾಹಿತಿ ಫಲಕದಲ್ಲಿ ಶಾಸಕರ ಹೆಸರೇ ಬದಲಾಗಿರುವುದು ಇಲಾಖೆಯ ನಿರ್ಲಕ್ಷ್ಯ ಸ್ಪಷ್ಟವಾಗಿ ಕಾಣುತ್ತದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಬಹುತೇಕ ಕಾಮಗಾರಿಗಳಲ್ಲಿ, ಕೆಲಸಗಳಲ್ಲಿ ಇಂತಹದ್ದೇ ಲೋಪಗಳು ಕೆಲವು ಇಲಾಖೆಗಳಿಂದ ಕಾಣುತ್ತದೆ. ಇದನ್ನು ಸುಳ್ಯದ ಸಜ್ಜನ ಶಾಸಕ ಅಂಗಾರ ಅವರೂ ಪ್ರಶ್ನೆ ಮಾಡುವುದಿಲ್ಲ. ಹೀಗಾಗಿ ಕಾಮಗಾರಿಗಳೂ ಹೀಗೇ ನಡೆಯುತ್ತದೆ ಎಂದು ಜನರು ಹೇಳುತ್ತಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…