ಸುಳ್ಯ: ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ದಾಖಲುಗೊಂಡ ವಿದ್ಯಾರ್ಥಿಗಳಿಗೆ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.
ಎ.ಓ.ಎಲ್.ಇಯ ನಿರ್ದೇಶಕಿ ಶೋಭಾ ಚಿದಾನಂದ ದೀಪ ಬೆಳಗಿಸಿ ಉದ್ಘಾಟಿಸಿದರು. ಪುತ್ತೂರು ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಸಂಯೋಜಕಿ ವಿಜಯ ಸರಸ್ವತಿ ಮುಖ್ಯ ಅತಿಥಿಯಾಗಿದ್ದರು. ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ್ ಅಡ್ತಲೆ, ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊ.ಡಿ.ಜವರೇ ಗೌಡ , ಎನ್ನೆಂಸಿ ಗೌರವ ಶೈಕ್ಷಣಿಕ ಸಲಹೆಗಾರ ಪ್ರೊ.ಎಂ.ಬಾಲಚಂದ್ರ ಗೌಡ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯಧಿಕ ಅಂಕಗಳಿಸಿ ಪ್ರಥಮ ಪಿಯುಸಿಗೆ ದಾಖಲುಗೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ವಿದ್ಯಾರ್ಥಿನಿಯರಾದ ನಂದಿತ, ಚರೀಷ್ಮ, ಅಕ್ಷತ, ಅನಘ, ವಿಸ್ಮಿತ ಪ್ರಾರ್ಥಿಸಿದರು. ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಾಧಿಕಾರಿ ಲಕ್ಷ್ಮಣ್ ಏನೇಕಲ್ ವಂದಿಸಿದರು. ಉಪನ್ಯಾಸಕರಾದ ದಾಮೋದರ ಪಿ, ಸಾವಿತ್ರಿ ಕೆ, ಬೇಬಿ ವಿದ್ಯಾ ಪಿ.ಬಿ ಕಾರ್ಯಕ್ರಮ ನಿರೂಪಿಸಿದರು.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490