ಸುಳ್ಯ: ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ದಾಖಲುಗೊಂಡ ವಿದ್ಯಾರ್ಥಿಗಳಿಗೆ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.
ಎ.ಓ.ಎಲ್.ಇಯ ನಿರ್ದೇಶಕಿ ಶೋಭಾ ಚಿದಾನಂದ ದೀಪ ಬೆಳಗಿಸಿ ಉದ್ಘಾಟಿಸಿದರು. ಪುತ್ತೂರು ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಸಂಯೋಜಕಿ ವಿಜಯ ಸರಸ್ವತಿ ಮುಖ್ಯ ಅತಿಥಿಯಾಗಿದ್ದರು. ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ್ ಅಡ್ತಲೆ, ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊ.ಡಿ.ಜವರೇ ಗೌಡ , ಎನ್ನೆಂಸಿ ಗೌರವ ಶೈಕ್ಷಣಿಕ ಸಲಹೆಗಾರ ಪ್ರೊ.ಎಂ.ಬಾಲಚಂದ್ರ ಗೌಡ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯಧಿಕ ಅಂಕಗಳಿಸಿ ಪ್ರಥಮ ಪಿಯುಸಿಗೆ ದಾಖಲುಗೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ವಿದ್ಯಾರ್ಥಿನಿಯರಾದ ನಂದಿತ, ಚರೀಷ್ಮ, ಅಕ್ಷತ, ಅನಘ, ವಿಸ್ಮಿತ ಪ್ರಾರ್ಥಿಸಿದರು. ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಾಧಿಕಾರಿ ಲಕ್ಷ್ಮಣ್ ಏನೇಕಲ್ ವಂದಿಸಿದರು. ಉಪನ್ಯಾಸಕರಾದ ದಾಮೋದರ ಪಿ, ಸಾವಿತ್ರಿ ಕೆ, ಬೇಬಿ ವಿದ್ಯಾ ಪಿ.ಬಿ ಕಾರ್ಯಕ್ರಮ ನಿರೂಪಿಸಿದರು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…