ಸುಳ್ಯ: ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ದಾಖಲುಗೊಂಡ ವಿದ್ಯಾರ್ಥಿಗಳಿಗೆ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.
ಎ.ಓ.ಎಲ್.ಇಯ ನಿರ್ದೇಶಕಿ ಶೋಭಾ ಚಿದಾನಂದ ದೀಪ ಬೆಳಗಿಸಿ ಉದ್ಘಾಟಿಸಿದರು. ಪುತ್ತೂರು ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಸಂಯೋಜಕಿ ವಿಜಯ ಸರಸ್ವತಿ ಮುಖ್ಯ ಅತಿಥಿಯಾಗಿದ್ದರು. ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ್ ಅಡ್ತಲೆ, ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊ.ಡಿ.ಜವರೇ ಗೌಡ , ಎನ್ನೆಂಸಿ ಗೌರವ ಶೈಕ್ಷಣಿಕ ಸಲಹೆಗಾರ ಪ್ರೊ.ಎಂ.ಬಾಲಚಂದ್ರ ಗೌಡ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯಧಿಕ ಅಂಕಗಳಿಸಿ ಪ್ರಥಮ ಪಿಯುಸಿಗೆ ದಾಖಲುಗೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ವಿದ್ಯಾರ್ಥಿನಿಯರಾದ ನಂದಿತ, ಚರೀಷ್ಮ, ಅಕ್ಷತ, ಅನಘ, ವಿಸ್ಮಿತ ಪ್ರಾರ್ಥಿಸಿದರು. ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಾಧಿಕಾರಿ ಲಕ್ಷ್ಮಣ್ ಏನೇಕಲ್ ವಂದಿಸಿದರು. ಉಪನ್ಯಾಸಕರಾದ ದಾಮೋದರ ಪಿ, ಸಾವಿತ್ರಿ ಕೆ, ಬೇಬಿ ವಿದ್ಯಾ ಪಿ.ಬಿ ಕಾರ್ಯಕ್ರಮ ನಿರೂಪಿಸಿದರು.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…