Advertisement
ನಮ್ಮೂರ ಸುದ್ದಿ

ಸುಳ್ಯ : ಎನ್ನೆಂಪಿಯುಸಿಯಲ್ಲಿ ಶ್ರದ್ಧಾಂಜಲಿ ಸಭೆ

Share

ಸುಳ್ಯ : ಕೆ.ವಿ.ಜಿ ಕಾನೂನು ಕಾಲೇಜಿನ ಸ್ಥಾಪಕ ಪ್ರಾಚಾರ್ಯರು,ಕೆ.ವಿ.ಜಿ ಸಮೂಹ ಸಂಸ್ಥೆಗಳ ಸಂಸ್ಥಾಪಕ ಡಾ.ಕುರುಂಜಿಯವರ ಆಪ್ತ ಒಡನಾಡಿಯಾಗಿದ್ದ ಪಡ್ಡಂಬೈಲು ವೆಂಕಟ್ರಮಣ ಗೌಡ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ಶ್ರದ್ಧಾಂಜಲಿ ಸಭೆ ಹಾಗೂ ನುಡಿನಮನವನ್ನು ಎನ್ನೆಂಸಿಯಲ್ಲಿ ಸಲ್ಲಿಸಲಾಯಿತು.

ಎನ್ನೆಂಸಿಯ ಗೌರವ ಶೈಕ್ಷಣಿಕ ಸಲಹೆಗಾರ ಪ್ರೊ. ಎಂ.ಬಾಲಚಂದ್ರ ಗೌಡರು ಮಾತನಾಡಿ ಪಡ್ಡಂಬೈಲುರವರು ರಾಜಕೀಯ ಸಚ್ಚಾರಿತ್ರ್ಯ ಹೊಂದಿದ ವ್ಯಕ್ತಿಯಾಗಿದ್ದರು, ಮೂಲಭೂತ ಸೌಕರ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಅವರ ಶ್ರಮ ಅಪಾರ,ಸಂಸ್ಥಾಪಕರ ಹೆಗಲಿಗೆ ಹೆಗಲು ಕೊಟ್ಟು ಈ ಸಂಸ್ಥೆಯ ಏಳಿಗೆಯಲ್ಲಿ ತೊಡಗಿಸಿಕೊಂಡವರು ಎಂದು ಹೇಳಿದರು.

ಎನ್ನೆಂಸಿಯ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪೂವಪ್ಪ ಕಣಿಯೂರು  ಮಾತನಾಡಿ ಕನ್ನಡ ಸಾಹಿತ್ಯ ಲೋಕದಲ್ಲಿ ನಾಟಕಕಾರರಾಗಿ , ಸಿನಿಮಾ ಕ್ಷೇತ್ರದಲ್ಲೂ ನಟರಾಗಿ ಹೆಸರು ವಾಸಿಯಾಗಿರುವ ಕಾರ್ನಾಡರದು ಬಹುಶ್ರುತ ವ್ಯಕ್ತಿತ್ವ-ಯಾವುದೇ ಕಾರಣಕ್ಕೂ ತನ್ನ ಸಿದ್ಧಾಂತ ಬಿಟ್ಟು ಕೊಟ್ಟವರಲ್ಲ ಎಂದರು.

ಎನ್ನೆಂಪಿಯುಸಿ ಪ್ರಾಂಶುಪಾಲೆ  ಹರಿಣಿ ಪುತ್ತೂರಾಯ ಮಾತನಾಡಿದರು. ಈ ಸಂದರ್ಭದಲ್ಲಿ ಎನ್ನೆಂಸಿ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ,ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊ.ಡಿ.ಜವರೇ ಗೌಡ ಉಪಸ್ಥಿತರಿದ್ದರು.

ಪಿಯು,ಪದವಿ ವಿಭಾಗದ ಬೋಧಕ-ಬೋಧಕೇತರ ವೃಂದ,ಪಿಯು ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು. ಮೃತರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಪುಷ್ಪ ನಮನವನ್ನು ಅರ್ಪಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

13 minutes ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

7 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

12 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

12 hours ago

ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ

ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…

12 hours ago

ಅಡಿಕೆ ತೋಟದ ಹಳದಿ ಎಲೆ ರೋಗ ಚೀನಾದಲ್ಲೂ ಮದ್ದಿಲ್ಲ…! | ಮಣ್ಣಿನೊಳಗಿನ ಡಿಎನ್‌ಎ ನೀಡುತ್ತಿದೆ ಎಚ್ಚರಿಕೆ

ಅಡಿಕೆಯ ಹಳದಿ ಎಲೆ ರೋಗವು(YLD) ಕೇವಲ ಎಲೆಯ ಸಮಸ್ಯೆಯಲ್ಲ, ಮಣ್ಣಿನೊಳಗಿನ ಸೂಕ್ಷ್ಮಜೀವಿಗಳ ಸಮತೋಲನ…

24 hours ago