Advertisement
ನಮ್ಮೂರ ಸುದ್ದಿ

ಸುಳ್ಯ : ಎನ್ನೆಂಪಿಯುಸಿಯಲ್ಲಿ ಶ್ರದ್ಧಾಂಜಲಿ ಸಭೆ

Share

ಸುಳ್ಯ : ಕೆ.ವಿ.ಜಿ ಕಾನೂನು ಕಾಲೇಜಿನ ಸ್ಥಾಪಕ ಪ್ರಾಚಾರ್ಯರು,ಕೆ.ವಿ.ಜಿ ಸಮೂಹ ಸಂಸ್ಥೆಗಳ ಸಂಸ್ಥಾಪಕ ಡಾ.ಕುರುಂಜಿಯವರ ಆಪ್ತ ಒಡನಾಡಿಯಾಗಿದ್ದ ಪಡ್ಡಂಬೈಲು ವೆಂಕಟ್ರಮಣ ಗೌಡ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ಶ್ರದ್ಧಾಂಜಲಿ ಸಭೆ ಹಾಗೂ ನುಡಿನಮನವನ್ನು ಎನ್ನೆಂಸಿಯಲ್ಲಿ ಸಲ್ಲಿಸಲಾಯಿತು.

ಎನ್ನೆಂಸಿಯ ಗೌರವ ಶೈಕ್ಷಣಿಕ ಸಲಹೆಗಾರ ಪ್ರೊ. ಎಂ.ಬಾಲಚಂದ್ರ ಗೌಡರು ಮಾತನಾಡಿ ಪಡ್ಡಂಬೈಲುರವರು ರಾಜಕೀಯ ಸಚ್ಚಾರಿತ್ರ್ಯ ಹೊಂದಿದ ವ್ಯಕ್ತಿಯಾಗಿದ್ದರು, ಮೂಲಭೂತ ಸೌಕರ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಅವರ ಶ್ರಮ ಅಪಾರ,ಸಂಸ್ಥಾಪಕರ ಹೆಗಲಿಗೆ ಹೆಗಲು ಕೊಟ್ಟು ಈ ಸಂಸ್ಥೆಯ ಏಳಿಗೆಯಲ್ಲಿ ತೊಡಗಿಸಿಕೊಂಡವರು ಎಂದು ಹೇಳಿದರು.

ಎನ್ನೆಂಸಿಯ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪೂವಪ್ಪ ಕಣಿಯೂರು  ಮಾತನಾಡಿ ಕನ್ನಡ ಸಾಹಿತ್ಯ ಲೋಕದಲ್ಲಿ ನಾಟಕಕಾರರಾಗಿ , ಸಿನಿಮಾ ಕ್ಷೇತ್ರದಲ್ಲೂ ನಟರಾಗಿ ಹೆಸರು ವಾಸಿಯಾಗಿರುವ ಕಾರ್ನಾಡರದು ಬಹುಶ್ರುತ ವ್ಯಕ್ತಿತ್ವ-ಯಾವುದೇ ಕಾರಣಕ್ಕೂ ತನ್ನ ಸಿದ್ಧಾಂತ ಬಿಟ್ಟು ಕೊಟ್ಟವರಲ್ಲ ಎಂದರು.

ಎನ್ನೆಂಪಿಯುಸಿ ಪ್ರಾಂಶುಪಾಲೆ  ಹರಿಣಿ ಪುತ್ತೂರಾಯ ಮಾತನಾಡಿದರು. ಈ ಸಂದರ್ಭದಲ್ಲಿ ಎನ್ನೆಂಸಿ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ,ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊ.ಡಿ.ಜವರೇ ಗೌಡ ಉಪಸ್ಥಿತರಿದ್ದರು.

ಪಿಯು,ಪದವಿ ವಿಭಾಗದ ಬೋಧಕ-ಬೋಧಕೇತರ ವೃಂದ,ಪಿಯು ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು. ಮೃತರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಪುಷ್ಪ ನಮನವನ್ನು ಅರ್ಪಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

5 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

6 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

15 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

16 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

16 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

20 hours ago