ಸುಳ್ಯ : ಕೆ.ವಿ.ಜಿ ಕಾನೂನು ಕಾಲೇಜಿನ ಸ್ಥಾಪಕ ಪ್ರಾಚಾರ್ಯರು,ಕೆ.ವಿ.ಜಿ ಸಮೂಹ ಸಂಸ್ಥೆಗಳ ಸಂಸ್ಥಾಪಕ ಡಾ.ಕುರುಂಜಿಯವರ ಆಪ್ತ ಒಡನಾಡಿಯಾಗಿದ್ದ ಪಡ್ಡಂಬೈಲು ವೆಂಕಟ್ರಮಣ ಗೌಡ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ಶ್ರದ್ಧಾಂಜಲಿ ಸಭೆ ಹಾಗೂ ನುಡಿನಮನವನ್ನು ಎನ್ನೆಂಸಿಯಲ್ಲಿ ಸಲ್ಲಿಸಲಾಯಿತು.
ಎನ್ನೆಂಸಿಯ ಗೌರವ ಶೈಕ್ಷಣಿಕ ಸಲಹೆಗಾರ ಪ್ರೊ. ಎಂ.ಬಾಲಚಂದ್ರ ಗೌಡರು ಮಾತನಾಡಿ ಪಡ್ಡಂಬೈಲುರವರು ರಾಜಕೀಯ ಸಚ್ಚಾರಿತ್ರ್ಯ ಹೊಂದಿದ ವ್ಯಕ್ತಿಯಾಗಿದ್ದರು, ಮೂಲಭೂತ ಸೌಕರ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಅವರ ಶ್ರಮ ಅಪಾರ,ಸಂಸ್ಥಾಪಕರ ಹೆಗಲಿಗೆ ಹೆಗಲು ಕೊಟ್ಟು ಈ ಸಂಸ್ಥೆಯ ಏಳಿಗೆಯಲ್ಲಿ ತೊಡಗಿಸಿಕೊಂಡವರು ಎಂದು ಹೇಳಿದರು.
ಎನ್ನೆಂಸಿಯ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪೂವಪ್ಪ ಕಣಿಯೂರು ಮಾತನಾಡಿ ಕನ್ನಡ ಸಾಹಿತ್ಯ ಲೋಕದಲ್ಲಿ ನಾಟಕಕಾರರಾಗಿ , ಸಿನಿಮಾ ಕ್ಷೇತ್ರದಲ್ಲೂ ನಟರಾಗಿ ಹೆಸರು ವಾಸಿಯಾಗಿರುವ ಕಾರ್ನಾಡರದು ಬಹುಶ್ರುತ ವ್ಯಕ್ತಿತ್ವ-ಯಾವುದೇ ಕಾರಣಕ್ಕೂ ತನ್ನ ಸಿದ್ಧಾಂತ ಬಿಟ್ಟು ಕೊಟ್ಟವರಲ್ಲ ಎಂದರು.
ಎನ್ನೆಂಪಿಯುಸಿ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಮಾತನಾಡಿದರು. ಈ ಸಂದರ್ಭದಲ್ಲಿ ಎನ್ನೆಂಸಿ ಪ್ರಾಂಶುಪಾಲ ಡಾ.ಕೆ.ಗಿರಿಧರ ಗೌಡ,ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊ.ಡಿ.ಜವರೇ ಗೌಡ ಉಪಸ್ಥಿತರಿದ್ದರು.
ಪಿಯು,ಪದವಿ ವಿಭಾಗದ ಬೋಧಕ-ಬೋಧಕೇತರ ವೃಂದ,ಪಿಯು ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು. ಮೃತರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಪುಷ್ಪ ನಮನವನ್ನು ಅರ್ಪಿಸಲಾಯಿತು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…