ಸುದ್ದಿಗಳು

ಸುಳ್ಯ ಎಸ್.ಎಸ್.ಎಫ್ ಡಿವಿಷನ್ ಕ್ಯೂ ಟೀಂ ವತಿಯಿಂದ ಸರಕಾರಿ ಆಸ್ಪತ್ರೆ ಆವರಣ ಸ್ವಚ್ಛತೆ

Share

ಸುಳ್ಯ.ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್(ಎಸ್.ಎಸ್.ಎಫ್) ಸುಳ್ಯ ಡಿವಿಷನ್ ಕ್ಯೂ ಟೀಂ ವತಿಯಿಂದ ಸುಳ್ಯ ತಾಲೂಕು ಸಾರ್ವಜನಿಕ ಆರೋಗ್ಯ ಕೇಂದ್ರದ ಪರಿಸರವನ್ನು 28 ರಂದು ಸ್ವಚ್ಛಗೊಳಿಸಲಾಯಿತು. ಬೆಳಗ್ಗೆ ಆರಂಭಗೊಂಡ ಸ್ವಚ್ಛತಾ ಕಾರ್ಯಕ್ಕೆ ಸಾರ್ವಜನಿಕ ತಾಲೂಕು ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ. ಕರುಣಾಕರ ಕೆ.ವಿ ಚಾಲನೆ ನೀಡಿದರು.

ತಾಲೂಕು ಆಸ್ಪತ್ರೆಯ ಶವಾಗಾರದ ಪರಿಸರದಲ್ಲಿ ಶೇಖರಣೆಗೊಂಡಿದ್ದ ಕಸ ತ್ಯಾಜ್ಯಗಳನ್ನು ಜೆಸಿಬಿ ಯಂತ್ರದ ಮೂಲಕ ಅಲ್ಲಿಂದ ತೆಗೆಸಿ ಶುಚಿಗೊಳಿಸಲಾಯಿತು. ಆಸ್ಪತ್ರೆಯ ಮುಂಭಾಗದ ಮೂಲಕ ಶವಾಗಾರಕ್ಕೆ ತೆರಳುವ ದಾರಿ ಮತ್ತು ಆಸ್ಪತ್ರೆಯ ಸುತ್ತಮುತ್ತಲೂ ಬೆಳೆದಿದ್ದ ಕಾಡು ಕೊಳೆಗಳನ್ನು ಕಟಾವು ಯಂತ್ರದ ಮೂಲಕ ತೆರವುಗೊಳಿಸಲಾಯಿತು.

ಎಸ್. ಎಸ್. ಎಫ್ ಸುಳ್ಯ ಡಿವಿಷನ್ ಅಧ್ಯಕ್ಷ ಜಿ.ಕೆ ಇಬ್ರಾಹಿಂ ಅಮ್ಜದಿ, ದ.ಕ ಈಸ್ಟ್ ಝೋನ್ ಬ್ಲಡ್ ಸೈಬೋ ಉಸ್ತುವಾರಿ ಸಿದ್ದೀಖ್ ಗೂನಡ್ಕ, ಎಸ್.ವೈ.ಎಸ್ ನಾಯಕರುಗಳಾದ ಅಶ್ರಫ್ ಸಖಾಫಿ ಕುಂಬಕ್ಕೋಡು, ಹಸೈನಾರ್ ಗುತ್ತಿಗಾರು, ಸಂಶುದ್ದೀನ್ ಪಳ್ಳಿಮಜಲು ಮುಂತಾದವರ ನೇತೃತ್ವದಲ್ಲಿ ಸುಮಾರು ಮೂವತ್ತರಷ್ಟು ಕಾರ್ಯಕರ್ತರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು. ಕಾರ್ಯಕರ್ತರನ್ನು ಸುಳ್ಯ ನಗರ ಪಂಚಾಯತ್ ಸದಸ್ಯ ಉಮರ್ ಕೆ.ಎಸ್. ರವರು ಪಾಲ್ಗೊಂಡು ಮಾರ್ಗದರ್ಶನ ನೀಡಿ ಸಹಕರಿಸಿದರು.

ಎಸ್‌ಎಸ್‌ಎಫ್ ಸುಳ್ಯ ಸೆಕ್ಟರ್ ಅಧ್ಯಕ್ಷ ಸ್ವಬಾಹುದ್ದೀನ್ ಹಿಮಮಿ, ಕೆಸಿಎಫ್ ಅಬುಧಾಬಿ ಪಬ್ಲೀಕೇಶನ್ ಕನ್ವಿನರ್ ಕಬೀರ್ ಜಟ್ಟಿಪಳ್ಳ ಸ್ವಚತೆ ಬಗ್ಗೆ ಮಾಹಿತಿ ನೀಡಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

ಗುಜ್ಜೆ ಶೇಂಗಾ ಪಲ್ಯ ಮಾಡುವ ವಿಧಾನ...

21 hours ago

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

1 day ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

1 day ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

1 day ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

2 days ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

2 days ago