Advertisement
ನಮ್ಮೂರ ಸುದ್ದಿ

ಸುಳ್ಯ ಎಸ್ ಎಸ್ ಎಫ್ ಸಮಿತಿಯ ವತಿಯಿಂದ ನಡೆದ ಧ್ವಜದಿನದ ಅಂಗವಾಗಿ ಸನ್ಮಾನ

Share

ಸುಳ್ಯ: ರಾಜ್ಯದ ಯಾವುದೇ ಭಾಗದಲ್ಲಿ ನಾನು ಸುಳ್ಯದಿಂದ ವರ್ಗಾವಣೆಗೊಂಡು ಹೋದರು ಈ ಮಕ್ಕಳ ಮತ್ತು ಸಂಸ್ಥೆಯೊಂದಿಗೆ ನನ್ನನ್ನು ನಾನು ತೊಡಗಿಸಿಕೊಳ್ಳಲು ಸಿದ್ದನಿದ್ದೇನೆ ಎಂದು ತಹಶೀಲ್ದಾರ್ ಕುಂಞ ಅಹಮ್ಮದ್ ಹೇಳಿದರು.

ಸುಳ್ಯ ಸಾಂದೀಪನಿ ಶಾಲೆಯಲ್ಲಿ ಸುಳ್ಯ ಎಸ್ ಎಸ್ ಎಫ್ ಸಮಿತಿಯ ವತಿಯಿಂದ ನಡೆದ ಧ್ವಜದಿನದ ಅಂಗವಾಗಿ ನಡೆದ ರೀಚ್ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕೇವಲ ಹಣಗಳಿಸಲು ಮತ್ತು ಸ್ವಾರ್ಥಕ್ಕಾಗಿ ಯೋಚಿಸಿ ಜೀವನ ನಡೆಸುವ ಈ ಕಾಲದಲ್ಲಿ ಪರರಿಗಾಗಿ ಮತ್ತು ಈ ರೀತಿಯ ಅಂಗವಿಕಲ ಮಕ್ಕಳಿಗಾಗಿ ದುಡಿಯುತ್ತಿರುವ ಸಂಸ್ಥೆಯ ಸ್ಥಾಪಕರಾದ ಎಂ ಬಿ ಸದಾಶಿವ ಮತ್ತು ಅವರಿಗೆ ಸಹಕರಿಸುತ್ತಿರುವ ಹರಿಣಿ ಸದಾಶಿವ ಅವರ ಕಾರ್ಯ ಚಟುವಟಿಕೆಗಳನ್ನು ಅವರು ಶ್ಲಾಘಿಸಿದರು.ಎಸ್ ಎಸ್ಎಫ್ ಸಮಿತಿಯ ವತಿಯಿಂದ ಆಯೋಜಿಸಿದ ಈ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ಎಲ್ಲಾ ಸಂಘ ಸಂಸ್ಥೆಗಳು ಈ ರೀತಿಯ ವಿದ್ಯಾರ್ಥಿಗಳಿಗೆ ಸ್ಪಂದಿಸುವ ಕೆಲಸಕಾರ್ಯಗಳು ನಡೆಯಬೇಕು ಎಂದು ಅಭಿಪ್ರಾಯ ಪಟ್ಟರು.

ಈ ಸಂದರ್ಭದಲ್ಲಿ ಸಮಿತಿಯ ರಾಜ್ಯ ಸ್ಥಾಪಕ ಅದ್ಯಕ್ಷ ಎ.ಬಿ ಅಸ್ಸನ್ ಫೈಝಿ,ಸಂಸ್ಥೆಯ ಸ್ಥಾಪಕ ಎಂಬಿ ಸದಾಶಿವ ರವರಿಗೆ ಶಾಲು ಹೊದಿಸಿ ಫಲ ಪುಷ್ಪ ನೀಡಿ ಸನ್ಮಾನಿಸಲಾಯಿತು.
ಸಮಿತಿಯ ವತಿಯಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಪರಿಕರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ವೈ ಎಸ್ ರಾಜ್ಯ ಸಮಿತಿಯ ಸದಸ್ಯ ಹಮೀದ್ ಬೀಜಕೊಚ್ಚಿ ವಹಿಸಿದ್ದರು. ವೇದಿಕೆಯಲ್ಲಿ ಸುಳ್ಯ ಸೆಂಟರ್ ಎಸ್ ವೈ ಎಸ್ ಅದ್ಯಕ್ಷ ಎ.ಬಿ.ಅಶ್ರಫ್ ಸಅದಿ,ಉಮ್ಮರ್ ಹಾಜಿ ಗೂನಡ್ಕ,ಎ.ಎಂ.ಫೈಝಲ್ ಝುಹರಿ,ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯನಿ ಹರಿಣಿ ಸದಾಶಿವ ವಿದ್ಯಾರ್ಥಿಗಳಿಗೆ ನೀಡುವ ಪಾಠ ಪ್ರವಚನಗಳ ಬಗ್ಗೆ ಮಾಹಿತಿ ನೀಡಿದರು.

ಸ್ವಚ್ಛ ಸುಳ್ಯ ರೂವಾರಿ ವಿನೋದ್ ಲಸ್ರಾದೋ,ಲೋಕೇಶ್ ಗುಡ್ಡೆಮನೆ,ಶರೀಫ್ ಜಟ್ಟಿಪಳ್ಳ ರವರಿಗೆ ಸಮಿತಿಯ ವತಿಯಿಂದ ಈ ಸಂದರ್ಭದಲ್ಲಿ ಸಾಲು ಹೊದಿಸಿ ಸನ್ಮಾನಿಸಲಾಯಿತು.
ಎಸ್ ಎಸ್ ಎಫ್ ಬ್ಲಡ್ ಸೈಬೋ ನಾಯಕ ಸಿದ್ದೀಖ್ ಗೂನಡ್ಕ ಕಾರ್ಯಕ್ರಮ ಉದ್ಘಾಟಿಸಿ ಸ್ವಾಧಿಕ್ ಗೂನಡ್ಕ ಸ್ವಾಗತಿಸಿ ವಂದಿಸಿದರು.

Advertisement

ಎಸ್ ವೈ ಎಸ್ ಸುಳ್ಯ ಕಾರ್ಯದರ್ಶಿ ಅಂದುಞಿ ಗೋರಡ್ಕ,ಸುಳ್ಯ ರೀಜಿನಲ್ ಎಸ್ ಎಂ ಎ ಸಂಘಟನಾ ಕಾರ್ಯಧರ್ಶಿ ಹಸೈನಾರ್ ಜಯನಗರ,ಎಸ್ ಎಸ್ಎಫ್ ಸಮಿತಿಯ ಸದಸ್ಯರು ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

10 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

10 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

10 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

11 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

11 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago