Advertisement
Categories: Uncategorized

ಸುಳ್ಯ ಎ ಪಿ ಎಂ ಸಿ ಯಲ್ಲಿ ಅಡಿಕೆ ಖರೀದಿಗೆ ನಿರ್ಧಾರ | ಸುಳ್ಯ ಶಾಸಕರ ನೇತೃತ್ವದಲ್ಲಿ ನಡೆದ ಸಭೆ |

Share
ಸುಳ್ಯ:  ಸುಳ್ಯ ಎ ಪಿ ಎಂ ಸಿ ಪ್ರಾಂಗಣದಲ್ಲಿ ಖಾಸಗಿ ವರ್ತಕರಿಂದ ಅಡಿಕೆ ಹಾಗೂ ಗೇರುಬೀಜ ಖರೀದಿ ನಡೆಸಲು ಅವಕಾಶ ನೀಡಲು ಶುಕ್ರವಾರ ನಿರ್ಧರಿಸಲಾಗಿದೆ. ಆದರೆ ಒಬ್ಬ ರೈತರಿಂದ ಗರಿಷ್ಟ ಒಂದು ಕ್ವಿಂಟಾಲ್ ಗೆ ಮಿತಿ ಹಾಕಲಾಗಿದೆ.

ಕೇಂದ್ರ ಸರಕಾರ ಹೊರಡಿಸಿದ ಲಾಕ್ಡೌನ್ ಆದೇಶದ ಎರಡನೇ ಪರಿಷ್ಕೃತ ಪಟ್ಟಿಯಲ್ಲಿ  ಕೃಷಿ ಉತ್ಪನ್ನ ಖರೀದಿ ಹಾಗೂ ಮಾರಾಟಕ್ಕೆ ಅವಕಾಶ ನೀಡಿತ್ತು. ಇದರಲ್ಲಿ  ಅಡಿಕೆ, ಕೊಕೋ, ಗೇರುಬೀಜ, ಸಾಂಬಾರ ಬೆಳೆಗಳೂ ಸೇರಿತ್ತು. ಇದರಂತೆ ಜಿಲ್ಲೆಯ ಪುತ್ತೂರು ಸೇರಿದಂತೆ ವಿವಿದೆಡೆ ಖಾಸಗಿ ವರ್ತಕರಿಂದ ಅಡಿಕೆ ಖರೀದಿಗೆ ಅವಕಾಶ ನೀಡಲಾಗಿತ್ತು. ಸುಳ್ಯದಲ್ಲಿ ಅಧಿಕೃತವಾಗಿ ಈ ಅವಕಾಶ ಇರಲಿಲ್ಲ. ಇದೀಗ ಶಾಸಕ ಅಂಗಾರ ಅಧ್ಯಕ್ಷತೆಯಲ್ಲಿ  ನಡೆದ ಸಭೆಯಲ್ಲಿ  ಖರೀದಿಗೆ ಅವಕಾಶ ನೀಡಲಾಗಿದೆ.

ಆದರೆ ನಿಯಮದ ಪ್ರಕಾರ ಖಾಸಗಿ ವಾಹನಗಳು ರಸ್ತೆಗಿಳಿಯಬಾರದು . ಹೀಗಾಗಿ ಎಪಿಎಂಸಿ ವತಿಯಿಂದಂದಲೇ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. ಅಡಿಕೆ ಮತ್ತು ಗೇರು ಬೀಜ ಮಾರಾಟ ಮಾಡುವ ರೈತರು ತಮ್ಮ‌ವ್ಯಾಪ್ತಿಯ ಎಪಿಎಂಸಿ ಸದಸ್ಯರುಗಳನ್ನು ಅಥವಾ ಸುಳ್ಯ ಎಪಿಎಂಸಿ ಕಚೇರಿ (08257-233711) ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ಬೆಳಗ್ಗೆ 7 ಗಂಟೆ ಯಿಂದ ಮಧ್ಯಾಹ್ನ 12 ಗಂಟೆ ವರೆಗೆ ಖರೀದಿ ನಡೆಯುತ್ತದೆ.

ಸಭೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಎ.ಪಿ.ಎಂ.ಸಿ.ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ,‌ ಉಪಾಧ್ಯಕ್ಷ ಸಂತೋಷ್ ಜಾಕೆ, ತಹಶೀಲ್ದಾರ್ ಅನಂತ ಶಂಕರ್ ಮೊದಲಾದವರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

54 minutes ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago