ಸಭೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಎ.ಪಿ.ಎಂ.ಸಿ.ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ತಹಶೀಲ್ದಾರ್ ಅನಂತ ಶಂಕರ್ ಮೊದಲಾದವರಿದ್ದರು.
ಕೇಂದ್ರ ಸರಕಾರ ಹೊರಡಿಸಿದ ಲಾಕ್ಡೌನ್ ಆದೇಶದ ಎರಡನೇ ಪರಿಷ್ಕೃತ ಪಟ್ಟಿಯಲ್ಲಿ ಕೃಷಿ ಉತ್ಪನ್ನ ಖರೀದಿ ಹಾಗೂ ಮಾರಾಟಕ್ಕೆ ಅವಕಾಶ ನೀಡಿತ್ತು. ಇದರಲ್ಲಿ ಅಡಿಕೆ, ಕೊಕೋ, ಗೇರುಬೀಜ, ಸಾಂಬಾರ ಬೆಳೆಗಳೂ ಸೇರಿತ್ತು. ಇದರಂತೆ ಜಿಲ್ಲೆಯ ಪುತ್ತೂರು ಸೇರಿದಂತೆ ವಿವಿದೆಡೆ ಖಾಸಗಿ ವರ್ತಕರಿಂದ ಅಡಿಕೆ ಖರೀದಿಗೆ ಅವಕಾಶ ನೀಡಲಾಗಿತ್ತು. ಸುಳ್ಯದಲ್ಲಿ ಅಧಿಕೃತವಾಗಿ ಈ ಅವಕಾಶ ಇರಲಿಲ್ಲ. ಇದೀಗ ಶಾಸಕ ಅಂಗಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಖರೀದಿಗೆ ಅವಕಾಶ ನೀಡಲಾಗಿದೆ.
ಆದರೆ ನಿಯಮದ ಪ್ರಕಾರ ಖಾಸಗಿ ವಾಹನಗಳು ರಸ್ತೆಗಿಳಿಯಬಾರದು . ಹೀಗಾಗಿ ಎಪಿಎಂಸಿ ವತಿಯಿಂದಂದಲೇ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. ಅಡಿಕೆ ಮತ್ತು ಗೇರು ಬೀಜ ಮಾರಾಟ ಮಾಡುವ ರೈತರು ತಮ್ಮವ್ಯಾಪ್ತಿಯ ಎಪಿಎಂಸಿ ಸದಸ್ಯರುಗಳನ್ನು ಅಥವಾ ಸುಳ್ಯ ಎಪಿಎಂಸಿ ಕಚೇರಿ (08257-233711) ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ಬೆಳಗ್ಗೆ 7 ಗಂಟೆ ಯಿಂದ ಮಧ್ಯಾಹ್ನ 12 ಗಂಟೆ ವರೆಗೆ ಖರೀದಿ ನಡೆಯುತ್ತದೆ.
ಸಭೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಎ.ಪಿ.ಎಂ.ಸಿ.ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ತಹಶೀಲ್ದಾರ್ ಅನಂತ ಶಂಕರ್ ಮೊದಲಾದವರಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.