ಸಭೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಎ.ಪಿ.ಎಂ.ಸಿ.ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ತಹಶೀಲ್ದಾರ್ ಅನಂತ ಶಂಕರ್ ಮೊದಲಾದವರಿದ್ದರು.
ಕೇಂದ್ರ ಸರಕಾರ ಹೊರಡಿಸಿದ ಲಾಕ್ಡೌನ್ ಆದೇಶದ ಎರಡನೇ ಪರಿಷ್ಕೃತ ಪಟ್ಟಿಯಲ್ಲಿ ಕೃಷಿ ಉತ್ಪನ್ನ ಖರೀದಿ ಹಾಗೂ ಮಾರಾಟಕ್ಕೆ ಅವಕಾಶ ನೀಡಿತ್ತು. ಇದರಲ್ಲಿ ಅಡಿಕೆ, ಕೊಕೋ, ಗೇರುಬೀಜ, ಸಾಂಬಾರ ಬೆಳೆಗಳೂ ಸೇರಿತ್ತು. ಇದರಂತೆ ಜಿಲ್ಲೆಯ ಪುತ್ತೂರು ಸೇರಿದಂತೆ ವಿವಿದೆಡೆ ಖಾಸಗಿ ವರ್ತಕರಿಂದ ಅಡಿಕೆ ಖರೀದಿಗೆ ಅವಕಾಶ ನೀಡಲಾಗಿತ್ತು. ಸುಳ್ಯದಲ್ಲಿ ಅಧಿಕೃತವಾಗಿ ಈ ಅವಕಾಶ ಇರಲಿಲ್ಲ. ಇದೀಗ ಶಾಸಕ ಅಂಗಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಖರೀದಿಗೆ ಅವಕಾಶ ನೀಡಲಾಗಿದೆ.
ಆದರೆ ನಿಯಮದ ಪ್ರಕಾರ ಖಾಸಗಿ ವಾಹನಗಳು ರಸ್ತೆಗಿಳಿಯಬಾರದು . ಹೀಗಾಗಿ ಎಪಿಎಂಸಿ ವತಿಯಿಂದಂದಲೇ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. ಅಡಿಕೆ ಮತ್ತು ಗೇರು ಬೀಜ ಮಾರಾಟ ಮಾಡುವ ರೈತರು ತಮ್ಮವ್ಯಾಪ್ತಿಯ ಎಪಿಎಂಸಿ ಸದಸ್ಯರುಗಳನ್ನು ಅಥವಾ ಸುಳ್ಯ ಎಪಿಎಂಸಿ ಕಚೇರಿ (08257-233711) ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ಬೆಳಗ್ಗೆ 7 ಗಂಟೆ ಯಿಂದ ಮಧ್ಯಾಹ್ನ 12 ಗಂಟೆ ವರೆಗೆ ಖರೀದಿ ನಡೆಯುತ್ತದೆ.
ಸಭೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಎ.ಪಿ.ಎಂ.ಸಿ.ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ತಹಶೀಲ್ದಾರ್ ಅನಂತ ಶಂಕರ್ ಮೊದಲಾದವರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…