ಸಭೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಎ.ಪಿ.ಎಂ.ಸಿ.ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ತಹಶೀಲ್ದಾರ್ ಅನಂತ ಶಂಕರ್ ಮೊದಲಾದವರಿದ್ದರು.
ಕೇಂದ್ರ ಸರಕಾರ ಹೊರಡಿಸಿದ ಲಾಕ್ಡೌನ್ ಆದೇಶದ ಎರಡನೇ ಪರಿಷ್ಕೃತ ಪಟ್ಟಿಯಲ್ಲಿ ಕೃಷಿ ಉತ್ಪನ್ನ ಖರೀದಿ ಹಾಗೂ ಮಾರಾಟಕ್ಕೆ ಅವಕಾಶ ನೀಡಿತ್ತು. ಇದರಲ್ಲಿ ಅಡಿಕೆ, ಕೊಕೋ, ಗೇರುಬೀಜ, ಸಾಂಬಾರ ಬೆಳೆಗಳೂ ಸೇರಿತ್ತು. ಇದರಂತೆ ಜಿಲ್ಲೆಯ ಪುತ್ತೂರು ಸೇರಿದಂತೆ ವಿವಿದೆಡೆ ಖಾಸಗಿ ವರ್ತಕರಿಂದ ಅಡಿಕೆ ಖರೀದಿಗೆ ಅವಕಾಶ ನೀಡಲಾಗಿತ್ತು. ಸುಳ್ಯದಲ್ಲಿ ಅಧಿಕೃತವಾಗಿ ಈ ಅವಕಾಶ ಇರಲಿಲ್ಲ. ಇದೀಗ ಶಾಸಕ ಅಂಗಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಖರೀದಿಗೆ ಅವಕಾಶ ನೀಡಲಾಗಿದೆ.
ಆದರೆ ನಿಯಮದ ಪ್ರಕಾರ ಖಾಸಗಿ ವಾಹನಗಳು ರಸ್ತೆಗಿಳಿಯಬಾರದು . ಹೀಗಾಗಿ ಎಪಿಎಂಸಿ ವತಿಯಿಂದಂದಲೇ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. ಅಡಿಕೆ ಮತ್ತು ಗೇರು ಬೀಜ ಮಾರಾಟ ಮಾಡುವ ರೈತರು ತಮ್ಮವ್ಯಾಪ್ತಿಯ ಎಪಿಎಂಸಿ ಸದಸ್ಯರುಗಳನ್ನು ಅಥವಾ ಸುಳ್ಯ ಎಪಿಎಂಸಿ ಕಚೇರಿ (08257-233711) ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ಬೆಳಗ್ಗೆ 7 ಗಂಟೆ ಯಿಂದ ಮಧ್ಯಾಹ್ನ 12 ಗಂಟೆ ವರೆಗೆ ಖರೀದಿ ನಡೆಯುತ್ತದೆ.
ಸಭೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಎ.ಪಿ.ಎಂ.ಸಿ.ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ತಹಶೀಲ್ದಾರ್ ಅನಂತ ಶಂಕರ್ ಮೊದಲಾದವರಿದ್ದರು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…