Advertisement
Categories: Uncategorized

ಸುಳ್ಯ ಎ ಪಿ ಎಂ ಸಿ ಯಲ್ಲಿ ಅಡಿಕೆ ಖರೀದಿಗೆ ನಿರ್ಧಾರ | ಸುಳ್ಯ ಶಾಸಕರ ನೇತೃತ್ವದಲ್ಲಿ ನಡೆದ ಸಭೆ |

Share
ಸುಳ್ಯ:  ಸುಳ್ಯ ಎ ಪಿ ಎಂ ಸಿ ಪ್ರಾಂಗಣದಲ್ಲಿ ಖಾಸಗಿ ವರ್ತಕರಿಂದ ಅಡಿಕೆ ಹಾಗೂ ಗೇರುಬೀಜ ಖರೀದಿ ನಡೆಸಲು ಅವಕಾಶ ನೀಡಲು ಶುಕ್ರವಾರ ನಿರ್ಧರಿಸಲಾಗಿದೆ. ಆದರೆ ಒಬ್ಬ ರೈತರಿಂದ ಗರಿಷ್ಟ ಒಂದು ಕ್ವಿಂಟಾಲ್ ಗೆ ಮಿತಿ ಹಾಕಲಾಗಿದೆ.
Advertisement
Advertisement

ಕೇಂದ್ರ ಸರಕಾರ ಹೊರಡಿಸಿದ ಲಾಕ್ಡೌನ್ ಆದೇಶದ ಎರಡನೇ ಪರಿಷ್ಕೃತ ಪಟ್ಟಿಯಲ್ಲಿ  ಕೃಷಿ ಉತ್ಪನ್ನ ಖರೀದಿ ಹಾಗೂ ಮಾರಾಟಕ್ಕೆ ಅವಕಾಶ ನೀಡಿತ್ತು. ಇದರಲ್ಲಿ  ಅಡಿಕೆ, ಕೊಕೋ, ಗೇರುಬೀಜ, ಸಾಂಬಾರ ಬೆಳೆಗಳೂ ಸೇರಿತ್ತು. ಇದರಂತೆ ಜಿಲ್ಲೆಯ ಪುತ್ತೂರು ಸೇರಿದಂತೆ ವಿವಿದೆಡೆ ಖಾಸಗಿ ವರ್ತಕರಿಂದ ಅಡಿಕೆ ಖರೀದಿಗೆ ಅವಕಾಶ ನೀಡಲಾಗಿತ್ತು. ಸುಳ್ಯದಲ್ಲಿ ಅಧಿಕೃತವಾಗಿ ಈ ಅವಕಾಶ ಇರಲಿಲ್ಲ. ಇದೀಗ ಶಾಸಕ ಅಂಗಾರ ಅಧ್ಯಕ್ಷತೆಯಲ್ಲಿ  ನಡೆದ ಸಭೆಯಲ್ಲಿ  ಖರೀದಿಗೆ ಅವಕಾಶ ನೀಡಲಾಗಿದೆ.

Advertisement

ಆದರೆ ನಿಯಮದ ಪ್ರಕಾರ ಖಾಸಗಿ ವಾಹನಗಳು ರಸ್ತೆಗಿಳಿಯಬಾರದು . ಹೀಗಾಗಿ ಎಪಿಎಂಸಿ ವತಿಯಿಂದಂದಲೇ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. ಅಡಿಕೆ ಮತ್ತು ಗೇರು ಬೀಜ ಮಾರಾಟ ಮಾಡುವ ರೈತರು ತಮ್ಮ‌ವ್ಯಾಪ್ತಿಯ ಎಪಿಎಂಸಿ ಸದಸ್ಯರುಗಳನ್ನು ಅಥವಾ ಸುಳ್ಯ ಎಪಿಎಂಸಿ ಕಚೇರಿ (08257-233711) ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ಬೆಳಗ್ಗೆ 7 ಗಂಟೆ ಯಿಂದ ಮಧ್ಯಾಹ್ನ 12 ಗಂಟೆ ವರೆಗೆ ಖರೀದಿ ನಡೆಯುತ್ತದೆ.

ಸಭೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಎ.ಪಿ.ಎಂ.ಸಿ.ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ,‌ ಉಪಾಧ್ಯಕ್ಷ ಸಂತೋಷ್ ಜಾಕೆ, ತಹಶೀಲ್ದಾರ್ ಅನಂತ ಶಂಕರ್ ಮೊದಲಾದವರಿದ್ದರು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೋದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ನೇಮಕ|

ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ಅವರನ್ನು ನೇಮಕಗೊಂಡಿದ್ದಾರೆ.

3 hours ago

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!

ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್‌…

17 hours ago

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.

19 hours ago

ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?

ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…

23 hours ago

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

1 day ago