Advertisement
Categories: Uncategorized

ಸುಳ್ಯ ಎ ಪಿ ಎಂ ಸಿ ಯಲ್ಲಿ ಅಡಿಕೆ ಖರೀದಿಗೆ ನಿರ್ಧಾರ | ಸುಳ್ಯ ಶಾಸಕರ ನೇತೃತ್ವದಲ್ಲಿ ನಡೆದ ಸಭೆ |

Share
ಸುಳ್ಯ:  ಸುಳ್ಯ ಎ ಪಿ ಎಂ ಸಿ ಪ್ರಾಂಗಣದಲ್ಲಿ ಖಾಸಗಿ ವರ್ತಕರಿಂದ ಅಡಿಕೆ ಹಾಗೂ ಗೇರುಬೀಜ ಖರೀದಿ ನಡೆಸಲು ಅವಕಾಶ ನೀಡಲು ಶುಕ್ರವಾರ ನಿರ್ಧರಿಸಲಾಗಿದೆ. ಆದರೆ ಒಬ್ಬ ರೈತರಿಂದ ಗರಿಷ್ಟ ಒಂದು ಕ್ವಿಂಟಾಲ್ ಗೆ ಮಿತಿ ಹಾಕಲಾಗಿದೆ.

ಕೇಂದ್ರ ಸರಕಾರ ಹೊರಡಿಸಿದ ಲಾಕ್ಡೌನ್ ಆದೇಶದ ಎರಡನೇ ಪರಿಷ್ಕೃತ ಪಟ್ಟಿಯಲ್ಲಿ  ಕೃಷಿ ಉತ್ಪನ್ನ ಖರೀದಿ ಹಾಗೂ ಮಾರಾಟಕ್ಕೆ ಅವಕಾಶ ನೀಡಿತ್ತು. ಇದರಲ್ಲಿ  ಅಡಿಕೆ, ಕೊಕೋ, ಗೇರುಬೀಜ, ಸಾಂಬಾರ ಬೆಳೆಗಳೂ ಸೇರಿತ್ತು. ಇದರಂತೆ ಜಿಲ್ಲೆಯ ಪುತ್ತೂರು ಸೇರಿದಂತೆ ವಿವಿದೆಡೆ ಖಾಸಗಿ ವರ್ತಕರಿಂದ ಅಡಿಕೆ ಖರೀದಿಗೆ ಅವಕಾಶ ನೀಡಲಾಗಿತ್ತು. ಸುಳ್ಯದಲ್ಲಿ ಅಧಿಕೃತವಾಗಿ ಈ ಅವಕಾಶ ಇರಲಿಲ್ಲ. ಇದೀಗ ಶಾಸಕ ಅಂಗಾರ ಅಧ್ಯಕ್ಷತೆಯಲ್ಲಿ  ನಡೆದ ಸಭೆಯಲ್ಲಿ  ಖರೀದಿಗೆ ಅವಕಾಶ ನೀಡಲಾಗಿದೆ.

ಆದರೆ ನಿಯಮದ ಪ್ರಕಾರ ಖಾಸಗಿ ವಾಹನಗಳು ರಸ್ತೆಗಿಳಿಯಬಾರದು . ಹೀಗಾಗಿ ಎಪಿಎಂಸಿ ವತಿಯಿಂದಂದಲೇ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. ಅಡಿಕೆ ಮತ್ತು ಗೇರು ಬೀಜ ಮಾರಾಟ ಮಾಡುವ ರೈತರು ತಮ್ಮ‌ವ್ಯಾಪ್ತಿಯ ಎಪಿಎಂಸಿ ಸದಸ್ಯರುಗಳನ್ನು ಅಥವಾ ಸುಳ್ಯ ಎಪಿಎಂಸಿ ಕಚೇರಿ (08257-233711) ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ಬೆಳಗ್ಗೆ 7 ಗಂಟೆ ಯಿಂದ ಮಧ್ಯಾಹ್ನ 12 ಗಂಟೆ ವರೆಗೆ ಖರೀದಿ ನಡೆಯುತ್ತದೆ.

ಸಭೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಎ.ಪಿ.ಎಂ.ಸಿ.ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ,‌ ಉಪಾಧ್ಯಕ್ಷ ಸಂತೋಷ್ ಜಾಕೆ, ತಹಶೀಲ್ದಾರ್ ಅನಂತ ಶಂಕರ್ ಮೊದಲಾದವರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 hour ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

2 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

8 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

13 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

1 day ago