Advertisement
ಸುದ್ದಿಗಳು

ಸುಳ್ಯ ಕಾಂಗ್ರೆಸ್ ಸಭೆಯಲ್ಲಿ ಆಂತರಿಕ ಕಲಹ ಸ್ಫೋಟ : ಸಭೆಯಿಂದ ಹೊರ ನಡೆಯಲು ಮುಂದಾದ ಜಿಲ್ಲಾಧ್ಯಕ್ಷರು

Share

ಸುಳ್ಯ: ಅ.2 ರಂದು ಮಂಗಳೂರಿನಲ್ಲಿ ನಡೆಯಲಿರುವ ಗಾಂಧಿ ನಡಿಗೆ ಕಾರ್ಯಕ್ರಮದ ಕುರಿತು ಚರ್ಚಿಸಲು ಸುಳ್ಯದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಆಂತರಿಕ ಸಮಸ್ಯೆ ಸ್ಫೋಟಗೊಂಡು ನಾಯಕರ ಮಧ್ಯೆ ವಾಗ್ವಾದ, ಗದ್ದಲ ಉಂಟಾದ ಘಟನೆ ನಡೆಯಿತು. ಇದರಿಂದ ಅಸಮಾಧಾನಗೊಂಡು ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಸಭೆಯಿಂದ ಹೊರ ನಡೆಯಲು ಮುಂದಾದ ಪ್ರಸಂಗಕ್ಕೂ ಸೋಮವಾರ ನಡೆದ ಸಭೆ ಸಾಕ್ಷಿಯಾಯಿತು.

ಅ. 2 ರಂದು ಮಂಗಳೂರಿನಲ್ಲಿ ನಡೆಯುವ ಗಾಂಧಿನಡಿಗೆ ಕಾರ್ಯಕ್ರಮದ ಪೂರ್ವಭಾವಿ ಸಭೆ ಸುಳ್ಯ ನಗರದ ಖಾಸಗೀ ಹೋಟೆಲ್ ಸಭಾಂಗಣದಲ್ಲಿ ನಡೆದಿತ್ತು. ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ ಮತ್ತಿತರ ಮುಖಂಡರು ಹಾಗು ಸುಳ್ಯ ಬ್ಲಾಕ್ ನ ಎಲ್ಲಾ ಪ್ರಮುಖರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಸಮಾಜಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ “ಸುಬ್ರಹ್ಮಣ್ಯದಲ್ಲಿ ಹೂವಿನ ಸ್ಟಾಲ್ ಇರಿಸಿದ ಲಕ್ಷ್ಮಿ ಸುಬ್ರಹ್ಮಣ್ಯ ಅವರ ಹೂವಿನ ಸ್ಟಾಲನ್ನು ತೆರವು ಮಾಡಿರುವುದು ಸರಿಯಲ್ಲ. ದೇವಸ್ಥಾನದ ಆಡಳಿತ ಕಾಂಗ್ರೆಸ್ ಕೈಯಲ್ಲಿದ್ದರೂ ಕಾಂಗ್ರೆಸ್ ಕಾರ್ಯಕರ್ತರಿಗೆ ಅನ್ಯಾಯ ಆಗಿದೆ ಎಂದು ದೂರಿದರು. ಅಲ್ಲದೆ ಕೆಲವು ಸಹಕಾರಿ ಸಂಘಗಳಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿಯವರ ಜೊತೆ ಒಳ ಒಪ್ಪಂದ ಮಾಡಿಕೊಂಡು ಗೆಲುವು ಸಾಧಿಸಿದ್ದಾರೆ” ಎಂದು ಆರೋಪಿಸಿದರು.

ಇದಕ್ಕೆ‌ ಸಭೆಯಲ್ಲಿ ವಿರೋಧ ವ್ಯಕ್ತವಾಗಿ ಸಭೆಯಲ್ಲಿ ಮಾತಿನ ಚಕಮಕಿ, ವಾಗ್ವಾದ ನಡೆದು ಗದ್ದಲದ ವಾತಾವರಣ ಉಂಟಾಯಿತು. ಗಾಂಧಿನಡಿಗೆ ಕುರಿತು ಮಾತ್ರ ಚರ್ಚಿಸಿ ಎಂದು ಜಿಲ್ಲಾಧ್ಯಕ್ಷರು ಮತ್ತು ಬ್ಲಾಕ್ ಅಧ್ಯಕ್ಷರು ಪದೇ ಪದೇ ವಿನಂತಿಸಿದರೂ ವಾಗ್ವಾದ ಮುಂದುವರಿದು ಸಭೆಯಲ್ಲಿ ಗದ್ದಲ, ಗೊಂದಲದ ವಾತಾವರಣ ಸೃಷ್ಠಿಯಾಯಿತು.

ಈ ಸಂದರ್ಭದಲ್ಲಿ ಅಸಮಾಧಾನಗೊಂಡ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸಭೆಯಿಂದ ಹೊರ ನಡೆಯಲು ಮುಂದಾದರು. ನಾಯಕರು ಅವರನ್ನು ಸಮಾಧಾನಪಡಿಸಿದರು. ಸಭೆ ಮುಗಿದ ಬಳಿಕ ಕಾರ್ಯಕರ್ತರ ಅಹವಾಲು ನಾಯಕರ ಮುಂದೆ ಇರಿಸಲು ಅವಕಾಶ ನೀಡಲಾಗುವುದು ಎಂದು ಬ್ಲಾಕ್ ಅಧ್ಯಕ್ಷ ಜಯಪ್ರಕಾಶ್ ರೈ ಎಲ್ಲರನ್ನೂ ಸಮಾಧಾನಪಡಿಸಿದ ಬಳಿಕ ಸಭೆ ಮುಂದುವರಿಯಿತು.

ಸಭೆ ಮುಗಿದ ಬಳಿಕ ಪ್ರತ್ಯೇಕವಾಗಿ ಖಾಸಗೀ ಹೋಟೆಲ್ ನ ಕೊಠಡಿಯಲ್ಲಿ ನಾಯಕರ ಜೊತೆ ಅಹವಾಲು ಮಂಡಿಸಲು ಅವಕಾಶ ನೀಡಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

19 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

1 day ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

1 day ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 day ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago