Advertisement
ಸುದ್ದಿಗಳು

ಸುಳ್ಯ ಕಾಂಗ್ರೆಸ್ ಸಭೆಯಲ್ಲಿ ಆಂತರಿಕ ಕಲಹ ಸ್ಫೋಟ : ಸಭೆಯಿಂದ ಹೊರ ನಡೆಯಲು ಮುಂದಾದ ಜಿಲ್ಲಾಧ್ಯಕ್ಷರು

Share

ಸುಳ್ಯ: ಅ.2 ರಂದು ಮಂಗಳೂರಿನಲ್ಲಿ ನಡೆಯಲಿರುವ ಗಾಂಧಿ ನಡಿಗೆ ಕಾರ್ಯಕ್ರಮದ ಕುರಿತು ಚರ್ಚಿಸಲು ಸುಳ್ಯದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಆಂತರಿಕ ಸಮಸ್ಯೆ ಸ್ಫೋಟಗೊಂಡು ನಾಯಕರ ಮಧ್ಯೆ ವಾಗ್ವಾದ, ಗದ್ದಲ ಉಂಟಾದ ಘಟನೆ ನಡೆಯಿತು. ಇದರಿಂದ ಅಸಮಾಧಾನಗೊಂಡು ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಸಭೆಯಿಂದ ಹೊರ ನಡೆಯಲು ಮುಂದಾದ ಪ್ರಸಂಗಕ್ಕೂ ಸೋಮವಾರ ನಡೆದ ಸಭೆ ಸಾಕ್ಷಿಯಾಯಿತು.

Advertisement

ಅ. 2 ರಂದು ಮಂಗಳೂರಿನಲ್ಲಿ ನಡೆಯುವ ಗಾಂಧಿನಡಿಗೆ ಕಾರ್ಯಕ್ರಮದ ಪೂರ್ವಭಾವಿ ಸಭೆ ಸುಳ್ಯ ನಗರದ ಖಾಸಗೀ ಹೋಟೆಲ್ ಸಭಾಂಗಣದಲ್ಲಿ ನಡೆದಿತ್ತು. ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ ಮತ್ತಿತರ ಮುಖಂಡರು ಹಾಗು ಸುಳ್ಯ ಬ್ಲಾಕ್ ನ ಎಲ್ಲಾ ಪ್ರಮುಖರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಸಮಾಜಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ “ಸುಬ್ರಹ್ಮಣ್ಯದಲ್ಲಿ ಹೂವಿನ ಸ್ಟಾಲ್ ಇರಿಸಿದ ಲಕ್ಷ್ಮಿ ಸುಬ್ರಹ್ಮಣ್ಯ ಅವರ ಹೂವಿನ ಸ್ಟಾಲನ್ನು ತೆರವು ಮಾಡಿರುವುದು ಸರಿಯಲ್ಲ. ದೇವಸ್ಥಾನದ ಆಡಳಿತ ಕಾಂಗ್ರೆಸ್ ಕೈಯಲ್ಲಿದ್ದರೂ ಕಾಂಗ್ರೆಸ್ ಕಾರ್ಯಕರ್ತರಿಗೆ ಅನ್ಯಾಯ ಆಗಿದೆ ಎಂದು ದೂರಿದರು. ಅಲ್ಲದೆ ಕೆಲವು ಸಹಕಾರಿ ಸಂಘಗಳಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿಯವರ ಜೊತೆ ಒಳ ಒಪ್ಪಂದ ಮಾಡಿಕೊಂಡು ಗೆಲುವು ಸಾಧಿಸಿದ್ದಾರೆ” ಎಂದು ಆರೋಪಿಸಿದರು.

ಇದಕ್ಕೆ‌ ಸಭೆಯಲ್ಲಿ ವಿರೋಧ ವ್ಯಕ್ತವಾಗಿ ಸಭೆಯಲ್ಲಿ ಮಾತಿನ ಚಕಮಕಿ, ವಾಗ್ವಾದ ನಡೆದು ಗದ್ದಲದ ವಾತಾವರಣ ಉಂಟಾಯಿತು. ಗಾಂಧಿನಡಿಗೆ ಕುರಿತು ಮಾತ್ರ ಚರ್ಚಿಸಿ ಎಂದು ಜಿಲ್ಲಾಧ್ಯಕ್ಷರು ಮತ್ತು ಬ್ಲಾಕ್ ಅಧ್ಯಕ್ಷರು ಪದೇ ಪದೇ ವಿನಂತಿಸಿದರೂ ವಾಗ್ವಾದ ಮುಂದುವರಿದು ಸಭೆಯಲ್ಲಿ ಗದ್ದಲ, ಗೊಂದಲದ ವಾತಾವರಣ ಸೃಷ್ಠಿಯಾಯಿತು.

ಈ ಸಂದರ್ಭದಲ್ಲಿ ಅಸಮಾಧಾನಗೊಂಡ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸಭೆಯಿಂದ ಹೊರ ನಡೆಯಲು ಮುಂದಾದರು. ನಾಯಕರು ಅವರನ್ನು ಸಮಾಧಾನಪಡಿಸಿದರು. ಸಭೆ ಮುಗಿದ ಬಳಿಕ ಕಾರ್ಯಕರ್ತರ ಅಹವಾಲು ನಾಯಕರ ಮುಂದೆ ಇರಿಸಲು ಅವಕಾಶ ನೀಡಲಾಗುವುದು ಎಂದು ಬ್ಲಾಕ್ ಅಧ್ಯಕ್ಷ ಜಯಪ್ರಕಾಶ್ ರೈ ಎಲ್ಲರನ್ನೂ ಸಮಾಧಾನಪಡಿಸಿದ ಬಳಿಕ ಸಭೆ ಮುಂದುವರಿಯಿತು.

ಸಭೆ ಮುಗಿದ ಬಳಿಕ ಪ್ರತ್ಯೇಕವಾಗಿ ಖಾಸಗೀ ಹೋಟೆಲ್ ನ ಕೊಠಡಿಯಲ್ಲಿ ನಾಯಕರ ಜೊತೆ ಅಹವಾಲು ಮಂಡಿಸಲು ಅವಕಾಶ ನೀಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

5 minutes ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

22 minutes ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

9 hours ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

9 hours ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

20 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

1 day ago