ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದವರಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಮೂರು ಮಂದಿ ನಾಯಕರು ಭರ್ಜರಿ ಗೆಲುವಿನತ್ತ ಮುನ್ನಡೆದಿದ್ದಾರೆ.
ದ.ಕ.ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಬೆಂಗಳೂರು ಉತ್ತರ ಕ್ಷೇತ್ತದ ಅಭ್ಯರ್ಥಿ ಡಿ.ವಿ.ಸದಾನಂದ ಗೌಡ ಸುಳ್ಯ ಕ್ಷೇತ್ರದವರಾಗಿದ್ದು ಬೇರೆ ಬೇರೆ ಕ್ಷೇತ್ರದಲ್ಲಿ ಚುನಾವಣೆ ಸ್ಪರ್ಧಿಸಿದ್ದಾರೆ. ಈ ಮೂವರು ಕೂಡ ಭರ್ಜರಿ ಗೆಲುವಿನತ್ತ ಮುನ್ನಡೆದಿದ್ದಾರೆ.
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡದವರಾದ ಸದಾನಂದ ಗೌಡ ನಾಲ್ಕನೆ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾದ್ದಾರೆ. ಕಡಬ ತಾಲೂಕಿನ ಪಾಲ್ತಾಡಿ ಕುಂಜಾಡಿಯವರಾದ ನಳಿನ್ ಕುಮಾರ್ ಮೂರನೇ ಬಾರಿ ದ.ಕ.ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಕಡಬ ತಾಲೂಕಿನ ಚಾರ್ವಾಕದವರಾದ ಶೋಭಾ ಕರಂದ್ಲಾಜೆ ಎರಡನೇ ಬಾರಿ ಉಡುಪಿ-ಚಿಕಮಗಳೂರು ಕ್ಷೇತ್ರದಿಂದ ಸ್ಪರ್ಧೆಗಿಳಿದಿದ್ದಾರೆ. ಸುಳ್ಯ ತಾಲೂಕಿನವರಾದ ಈ ಮೂವರು ಗೆಲುವಿನತ್ತ ಮುನ್ನಡೆದಿರುವುದು ಸುಳ್ಯ ಬಿಜೆಪಿಯಲ್ಲಿ ಸಂಭ್ರಮ ಇನ್ನಷ್ಟು ಹೆಚ್ಚಿಸಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…