ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದವರಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಮೂರು ಮಂದಿ ನಾಯಕರು ಭರ್ಜರಿ ಗೆಲುವಿನತ್ತ ಮುನ್ನಡೆದಿದ್ದಾರೆ.
ದ.ಕ.ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಬೆಂಗಳೂರು ಉತ್ತರ ಕ್ಷೇತ್ತದ ಅಭ್ಯರ್ಥಿ ಡಿ.ವಿ.ಸದಾನಂದ ಗೌಡ ಸುಳ್ಯ ಕ್ಷೇತ್ರದವರಾಗಿದ್ದು ಬೇರೆ ಬೇರೆ ಕ್ಷೇತ್ರದಲ್ಲಿ ಚುನಾವಣೆ ಸ್ಪರ್ಧಿಸಿದ್ದಾರೆ. ಈ ಮೂವರು ಕೂಡ ಭರ್ಜರಿ ಗೆಲುವಿನತ್ತ ಮುನ್ನಡೆದಿದ್ದಾರೆ.
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡದವರಾದ ಸದಾನಂದ ಗೌಡ ನಾಲ್ಕನೆ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾದ್ದಾರೆ. ಕಡಬ ತಾಲೂಕಿನ ಪಾಲ್ತಾಡಿ ಕುಂಜಾಡಿಯವರಾದ ನಳಿನ್ ಕುಮಾರ್ ಮೂರನೇ ಬಾರಿ ದ.ಕ.ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಕಡಬ ತಾಲೂಕಿನ ಚಾರ್ವಾಕದವರಾದ ಶೋಭಾ ಕರಂದ್ಲಾಜೆ ಎರಡನೇ ಬಾರಿ ಉಡುಪಿ-ಚಿಕಮಗಳೂರು ಕ್ಷೇತ್ರದಿಂದ ಸ್ಪರ್ಧೆಗಿಳಿದಿದ್ದಾರೆ. ಸುಳ್ಯ ತಾಲೂಕಿನವರಾದ ಈ ಮೂವರು ಗೆಲುವಿನತ್ತ ಮುನ್ನಡೆದಿರುವುದು ಸುಳ್ಯ ಬಿಜೆಪಿಯಲ್ಲಿ ಸಂಭ್ರಮ ಇನ್ನಷ್ಟು ಹೆಚ್ಚಿಸಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…