ಸುಳ್ಯ: ಸುಳ್ಯ ಸಿದ್ಧಿ ವಿನಾಯಕ ಸೇವಾ ಸಮಿತಿ ಹಾಗು ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆದ 51ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಂಪನ್ನಗೊಂಡಿತು. ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಐದು ದಿನಗಳ ಕಾಲ ನಡೆದ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಂಡಿತು. ಚೆಂಡೆ ವಾದ್ಯಗಳು, ನೃತ್ಯ ಭಜನೆ, ಸಿಡಿ ಮದ್ದಿನ ವರ್ಣ ಚಿತ್ತಾರ ಶೋಭಾಯಾತ್ರೆಗೆ ಸಾಥ್ ನೀಡಿತು. ಶ್ರೀ ಚೆನ್ನಕೇಶವ ದೇವಸ್ಥಾನದಿಂದ ಹೊರಟ ಆಕರ್ಷಕ ಶೋಭಾಯಾತ್ರೆ ನಗರದಲ್ಲಿ ಸಂಚರಿಸಿ ವಿಗ್ರಹವನ್ನು ಪಯಸ್ವಿನಿ ನದಿಯಲ್ಲಿ ಜಲಸ್ತಂಭನಗೊಳಿಸುವುದರೊಂದಿಗೆ ಸಮಾಪನಗೊಂಡಿತು. ನಗರದ ರಸ್ತೆ ಬದಿಯಲ್ಲಿ ಜಮಾಯಿಸಿದ್ದ ನೂರಾರು ಮಂದಿ ಮೆರವಣಿಗೆಯನ್ನು ವೀಕ್ಷಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…