ಸುಳ್ಯ: ಸುಳ್ಯ ಸಿದ್ಧಿ ವಿನಾಯಕ ಸೇವಾ ಸಮಿತಿ ಹಾಗು ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆದ 51ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಂಪನ್ನಗೊಂಡಿತು. ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಐದು ದಿನಗಳ ಕಾಲ ನಡೆದ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಂಡಿತು. ಚೆಂಡೆ ವಾದ್ಯಗಳು, ನೃತ್ಯ ಭಜನೆ, ಸಿಡಿ ಮದ್ದಿನ ವರ್ಣ ಚಿತ್ತಾರ ಶೋಭಾಯಾತ್ರೆಗೆ ಸಾಥ್ ನೀಡಿತು. ಶ್ರೀ ಚೆನ್ನಕೇಶವ ದೇವಸ್ಥಾನದಿಂದ ಹೊರಟ ಆಕರ್ಷಕ ಶೋಭಾಯಾತ್ರೆ ನಗರದಲ್ಲಿ ಸಂಚರಿಸಿ ವಿಗ್ರಹವನ್ನು ಪಯಸ್ವಿನಿ ನದಿಯಲ್ಲಿ ಜಲಸ್ತಂಭನಗೊಳಿಸುವುದರೊಂದಿಗೆ ಸಮಾಪನಗೊಂಡಿತು. ನಗರದ ರಸ್ತೆ ಬದಿಯಲ್ಲಿ ಜಮಾಯಿಸಿದ್ದ ನೂರಾರು ಮಂದಿ ಮೆರವಣಿಗೆಯನ್ನು ವೀಕ್ಷಿಸಿದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…