ಸುಳ್ಯ: ಸುಳ್ಯ ಸಿದ್ಧಿ ವಿನಾಯಕ ಸೇವಾ ಸಮಿತಿ ಹಾಗು ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆದ 51ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಂಪನ್ನಗೊಂಡಿತು. ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಐದು ದಿನಗಳ ಕಾಲ ನಡೆದ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಂಡಿತು. ಚೆಂಡೆ ವಾದ್ಯಗಳು, ನೃತ್ಯ ಭಜನೆ, ಸಿಡಿ ಮದ್ದಿನ ವರ್ಣ ಚಿತ್ತಾರ ಶೋಭಾಯಾತ್ರೆಗೆ ಸಾಥ್ ನೀಡಿತು. ಶ್ರೀ ಚೆನ್ನಕೇಶವ ದೇವಸ್ಥಾನದಿಂದ ಹೊರಟ ಆಕರ್ಷಕ ಶೋಭಾಯಾತ್ರೆ ನಗರದಲ್ಲಿ ಸಂಚರಿಸಿ ವಿಗ್ರಹವನ್ನು ಪಯಸ್ವಿನಿ ನದಿಯಲ್ಲಿ ಜಲಸ್ತಂಭನಗೊಳಿಸುವುದರೊಂದಿಗೆ ಸಮಾಪನಗೊಂಡಿತು. ನಗರದ ರಸ್ತೆ ಬದಿಯಲ್ಲಿ ಜಮಾಯಿಸಿದ್ದ ನೂರಾರು ಮಂದಿ ಮೆರವಣಿಗೆಯನ್ನು ವೀಕ್ಷಿಸಿದರು.
ಅಡಿಕೆ ಬೆಳೆಗಾರರಿಗೆ ಜೂನ್ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…
ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…