ಸುಳ್ಯ: ಸುಳ್ಯ ಸಿದ್ಧಿ ವಿನಾಯಕ ಸೇವಾ ಸಮಿತಿ ಹಾಗು ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆದ 51ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಂಪನ್ನಗೊಂಡಿತು. ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಐದು ದಿನಗಳ ಕಾಲ ನಡೆದ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಂಡಿತು. ಚೆಂಡೆ ವಾದ್ಯಗಳು, ನೃತ್ಯ ಭಜನೆ, ಸಿಡಿ ಮದ್ದಿನ ವರ್ಣ ಚಿತ್ತಾರ ಶೋಭಾಯಾತ್ರೆಗೆ ಸಾಥ್ ನೀಡಿತು. ಶ್ರೀ ಚೆನ್ನಕೇಶವ ದೇವಸ್ಥಾನದಿಂದ ಹೊರಟ ಆಕರ್ಷಕ ಶೋಭಾಯಾತ್ರೆ ನಗರದಲ್ಲಿ ಸಂಚರಿಸಿ ವಿಗ್ರಹವನ್ನು ಪಯಸ್ವಿನಿ ನದಿಯಲ್ಲಿ ಜಲಸ್ತಂಭನಗೊಳಿಸುವುದರೊಂದಿಗೆ ಸಮಾಪನಗೊಂಡಿತು. ನಗರದ ರಸ್ತೆ ಬದಿಯಲ್ಲಿ ಜಮಾಯಿಸಿದ್ದ ನೂರಾರು ಮಂದಿ ಮೆರವಣಿಗೆಯನ್ನು ವೀಕ್ಷಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…