ಸುಳ್ಯ: ಸುಳ್ಯ ಸಿದ್ಧಿ ವಿನಾಯಕ ಸೇವಾ ಸಮಿತಿ ಹಾಗು ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆದ 51ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಂಪನ್ನಗೊಂಡಿತು. ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಐದು ದಿನಗಳ ಕಾಲ ನಡೆದ ಗಣೇಶೋತ್ಸವ ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಂಡಿತು. ಚೆಂಡೆ ವಾದ್ಯಗಳು, ನೃತ್ಯ ಭಜನೆ, ಸಿಡಿ ಮದ್ದಿನ ವರ್ಣ ಚಿತ್ತಾರ ಶೋಭಾಯಾತ್ರೆಗೆ ಸಾಥ್ ನೀಡಿತು. ಶ್ರೀ ಚೆನ್ನಕೇಶವ ದೇವಸ್ಥಾನದಿಂದ ಹೊರಟ ಆಕರ್ಷಕ ಶೋಭಾಯಾತ್ರೆ ನಗರದಲ್ಲಿ ಸಂಚರಿಸಿ ವಿಗ್ರಹವನ್ನು ಪಯಸ್ವಿನಿ ನದಿಯಲ್ಲಿ ಜಲಸ್ತಂಭನಗೊಳಿಸುವುದರೊಂದಿಗೆ ಸಮಾಪನಗೊಂಡಿತು. ನಗರದ ರಸ್ತೆ ಬದಿಯಲ್ಲಿ ಜಮಾಯಿಸಿದ್ದ ನೂರಾರು ಮಂದಿ ಮೆರವಣಿಗೆಯನ್ನು ವೀಕ್ಷಿಸಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…