MIRROR FOCUS

ಸುಳ್ಯ-ಗುತ್ತಿಗಾರು ರಸ್ತೆಯಲ್ಲಿ ಅಪಾಯದ ಕೆರೆ ಇದೆ : ಮುಂಜಾಗ್ರತಾ ಕ್ರಮದ ಕಡೆಗೆ ಚಿಂತನೆ ನಡೆಯಬೇಕಿದೆ…

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇತ್ತೀಚೆಗೆ ಸುಳ್ಯ-ಪುತ್ತೂರು ರಸ್ತೆಯ ಬದಿಯ ಕೆರೆಗೆ ಕಾರೊಂದು ಉರುಳಿ ಬಿದ್ದು 4 ಜನರು ಮೃತರಾದರು. ಈ ದಾರುಣ ಘಟನೆ ಬಳಿಕ ಹಲವು ಕಡೆಗಳಲ್ಲಿ  ಇಂತಹ ಕೆರೆಗಳು ಇರುವುದರ ಬಗ್ಗೆ ಜನಸಾಮಾನ್ಯರು ಹೇಳುತ್ತಾರೆ.ಇಂತಹದ್ದೇ ಒಂದು ಕೆರೆಯ ಬಗ್ಗೆ ಸುಳ್ಯನ್ಯೂಸ್.ಕಾಂ ಗೆ ಫೋಟೋ ಸಹಿತ ಸಾರ್ವಜನಿಕರು ಕಳುಹಿಸಿದ್ದಾರೆ. ಅದರ ಕಡೆಗೆ ಬೆಳಕು ಹರಿಸಲಾಗಿದೆ. ಇದನ್ನು ಆಡಳಿತವು ಗಮನಿಸಿ ತುಸು ಮುಂಜಾಗ್ರತಾ ಕ್ರಮಗಳನ್ನು  ಕೈಗೊಂಡರೆ ದಾರುಣ ಘಟನೆಗಳು ಕಡಿಮೆ ಆದಾವು ಎಂಬ ಆಶಯದೊಂದಿಗೆ..

Advertisement
Advertisement

ಸುಳ್ಯ-ಪುತ್ತೂರು ರಸ್ತೆಯಲ್ಲಿ ಕೆರೆಗೆ ಕಾರು ಬಿದ್ದು 4 ಜನ ಮೃತಪಟ್ಟ ಬಳಿಕ ಇದೀಗ ಸಾರ್ವಜನಿಕರು ಎಚ್ಚರಿಕೆ ವಹಿಸಿ ಅಂತಹ ಘಟನೆಗಳು ಮರುಕಳಿಸಬಾರದು ಎಂದು ಜಾಗೃತೆ ವಹಿಸಿದ್ದಾರೆ. ಮಾಧ್ಯಮಗಳ ಮೂಲಕ ಆಡಳಿತವನ್ನು ಎಚ್ಚರಿಸುವ ಹಾಗೂ ಗಮನಸೆಳೆಯುವ ಪ್ರಯತ್ನ ಮಾಡಿದ್ದಾರೆ. ಈಗ ಸುಳ್ಯ-ಗುತ್ತಿಗಾರು ರಸ್ತೆ ನಡುವಿನ ನಾರ್ಣಕಜೆ ಬಳಿಯ ಕೆರೆಯ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಇಲ್ಲಿ ಇನ್ನಷ್ಟು ಮುಂಜಾಗ್ರತೆ ಬೇಕು ಎಂದು ಹೇಳಿದ್ದಾರೆ.

ಸುಳ್ಯ-ಗುತ್ತಿಗಾರು ರಸ್ತೆಯ ನಾರ್ಣಕಜೆ ಎಂಬಲ್ಲಿ ಕೆರೆಯೊಂದು ಇದೆ. ಇದಕ್ಕೆ ಈಗಾಗಲೇ ಲೋಕೋಪಯೋಗಿ ಇಲಾಖೆ ತಡೆಗೋಡೆ ಕಟ್ಟಿದೆ. ಆದರೆ ಅದು ಪೂರ್ತಿಯಾಗಿಲ್ಲ. ಈ ರಸ್ತೆ ಮೂಲಕ ಸ್ಥಳೀಯರು ಮಾತ್ರವಲ್ಲ ದೂರದ ಊರಿನಿಂದ ಅನೇಕರು ಕುಕ್ಕೆ ಸುಬ್ರಹ್ಮಣ್ಯದ ಕಡೆಗೆ ತೆರಳುತ್ತಾರೆ. ಹೀಗಾಗಿ ಪರವೂರಿನ ಮಂದಿಗೆ ಇಲ್ಲಿ ಕೆರೆ ಇರುವುದು  ಅರಿವಿಗೆ ಬರುವುದಿಲ್ಲ. ಗುತ್ತಿಗಾರು ಕಡೆಯಿಂದ ಬರುವ ವೇಳೆ ನಿಯಂತ್ರಣ ತಪ್ಪಿದರೆ ಅಪಾಯವಾಗುವ ಸಾಧ್ಯತೆ ಇದೆ. ಇಲ್ಲಿ ಯಾವುದೇ  ತಡೆಗೋಡೆ ಇಲ್ಲದೇ ಇರುವುದು ಹಾಗೂ ಕಾಡುಪೊದೆಗಳೂ ಇಲ್ಲಿ ತುಂಬಿರುವುದು  ಅಪಾಯಕ್ಕೆ ಕಾರಣವಾಗುತ್ತದೆ. ಈ ಹಿಂದೊಮ್ಮೆ ವಾಹನವೊಂದು ಇಲ್ಲಿ ಬಿದ್ದಿತ್ತು ಎಂದು ಸಾರ್ವಜನಿಕರು ನೆನಪು ಮಾಡುತ್ತಾರೆ. ಈ ಕಾರಣದಿಂದ ಇಲ್ಲಿ  ಪೂರ್ಣ ಪ್ರಮಾಣದಲ್ಲಿ ಇಡೀ ಕೆರೆಗೆ ರಸ್ತೆ ಭಾಗದಿಂದ ತಡೆಗೋಡೆ ಅಗತ್ಯ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಮೂಲಕ ಅಪಾಯ ತಪ್ಪಿಸಬೇಕು ಎಂದು ಆಡಳಿತದ ಗಮನ ಸೆಳೆದಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

4 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

4 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

4 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

5 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

5 hours ago

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…

6 hours ago