ಇತ್ತೀಚೆಗೆ ಸುಳ್ಯ-ಪುತ್ತೂರು ರಸ್ತೆಯ ಬದಿಯ ಕೆರೆಗೆ ಕಾರೊಂದು ಉರುಳಿ ಬಿದ್ದು 4 ಜನರು ಮೃತರಾದರು. ಈ ದಾರುಣ ಘಟನೆ ಬಳಿಕ ಹಲವು ಕಡೆಗಳಲ್ಲಿ ಇಂತಹ ಕೆರೆಗಳು ಇರುವುದರ ಬಗ್ಗೆ ಜನಸಾಮಾನ್ಯರು ಹೇಳುತ್ತಾರೆ.ಇಂತಹದ್ದೇ ಒಂದು ಕೆರೆಯ ಬಗ್ಗೆ ಸುಳ್ಯನ್ಯೂಸ್.ಕಾಂ ಗೆ ಫೋಟೋ ಸಹಿತ ಸಾರ್ವಜನಿಕರು ಕಳುಹಿಸಿದ್ದಾರೆ. ಅದರ ಕಡೆಗೆ ಬೆಳಕು ಹರಿಸಲಾಗಿದೆ. ಇದನ್ನು ಆಡಳಿತವು ಗಮನಿಸಿ ತುಸು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ದಾರುಣ ಘಟನೆಗಳು ಕಡಿಮೆ ಆದಾವು ಎಂಬ ಆಶಯದೊಂದಿಗೆ..
ಸುಳ್ಯ-ಪುತ್ತೂರು ರಸ್ತೆಯಲ್ಲಿ ಕೆರೆಗೆ ಕಾರು ಬಿದ್ದು 4 ಜನ ಮೃತಪಟ್ಟ ಬಳಿಕ ಇದೀಗ ಸಾರ್ವಜನಿಕರು ಎಚ್ಚರಿಕೆ ವಹಿಸಿ ಅಂತಹ ಘಟನೆಗಳು ಮರುಕಳಿಸಬಾರದು ಎಂದು ಜಾಗೃತೆ ವಹಿಸಿದ್ದಾರೆ. ಮಾಧ್ಯಮಗಳ ಮೂಲಕ ಆಡಳಿತವನ್ನು ಎಚ್ಚರಿಸುವ ಹಾಗೂ ಗಮನಸೆಳೆಯುವ ಪ್ರಯತ್ನ ಮಾಡಿದ್ದಾರೆ. ಈಗ ಸುಳ್ಯ-ಗುತ್ತಿಗಾರು ರಸ್ತೆ ನಡುವಿನ ನಾರ್ಣಕಜೆ ಬಳಿಯ ಕೆರೆಯ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಇಲ್ಲಿ ಇನ್ನಷ್ಟು ಮುಂಜಾಗ್ರತೆ ಬೇಕು ಎಂದು ಹೇಳಿದ್ದಾರೆ.
ಸುಳ್ಯ-ಗುತ್ತಿಗಾರು ರಸ್ತೆಯ ನಾರ್ಣಕಜೆ ಎಂಬಲ್ಲಿ ಕೆರೆಯೊಂದು ಇದೆ. ಇದಕ್ಕೆ ಈಗಾಗಲೇ ಲೋಕೋಪಯೋಗಿ ಇಲಾಖೆ ತಡೆಗೋಡೆ ಕಟ್ಟಿದೆ. ಆದರೆ ಅದು ಪೂರ್ತಿಯಾಗಿಲ್ಲ. ಈ ರಸ್ತೆ ಮೂಲಕ ಸ್ಥಳೀಯರು ಮಾತ್ರವಲ್ಲ ದೂರದ ಊರಿನಿಂದ ಅನೇಕರು ಕುಕ್ಕೆ ಸುಬ್ರಹ್ಮಣ್ಯದ ಕಡೆಗೆ ತೆರಳುತ್ತಾರೆ. ಹೀಗಾಗಿ ಪರವೂರಿನ ಮಂದಿಗೆ ಇಲ್ಲಿ ಕೆರೆ ಇರುವುದು ಅರಿವಿಗೆ ಬರುವುದಿಲ್ಲ. ಗುತ್ತಿಗಾರು ಕಡೆಯಿಂದ ಬರುವ ವೇಳೆ ನಿಯಂತ್ರಣ ತಪ್ಪಿದರೆ ಅಪಾಯವಾಗುವ ಸಾಧ್ಯತೆ ಇದೆ. ಇಲ್ಲಿ ಯಾವುದೇ ತಡೆಗೋಡೆ ಇಲ್ಲದೇ ಇರುವುದು ಹಾಗೂ ಕಾಡುಪೊದೆಗಳೂ ಇಲ್ಲಿ ತುಂಬಿರುವುದು ಅಪಾಯಕ್ಕೆ ಕಾರಣವಾಗುತ್ತದೆ. ಈ ಹಿಂದೊಮ್ಮೆ ವಾಹನವೊಂದು ಇಲ್ಲಿ ಬಿದ್ದಿತ್ತು ಎಂದು ಸಾರ್ವಜನಿಕರು ನೆನಪು ಮಾಡುತ್ತಾರೆ. ಈ ಕಾರಣದಿಂದ ಇಲ್ಲಿ ಪೂರ್ಣ ಪ್ರಮಾಣದಲ್ಲಿ ಇಡೀ ಕೆರೆಗೆ ರಸ್ತೆ ಭಾಗದಿಂದ ತಡೆಗೋಡೆ ಅಗತ್ಯ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಮೂಲಕ ಅಪಾಯ ತಪ್ಪಿಸಬೇಕು ಎಂದು ಆಡಳಿತದ ಗಮನ ಸೆಳೆದಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…