Advertisement
MIRROR FOCUS

ಸುಳ್ಯ-ಗುತ್ತಿಗಾರು ರಸ್ತೆಯಲ್ಲಿ ಅಪಾಯದ ಕೆರೆ ಇದೆ : ಮುಂಜಾಗ್ರತಾ ಕ್ರಮದ ಕಡೆಗೆ ಚಿಂತನೆ ನಡೆಯಬೇಕಿದೆ…

Share

ಇತ್ತೀಚೆಗೆ ಸುಳ್ಯ-ಪುತ್ತೂರು ರಸ್ತೆಯ ಬದಿಯ ಕೆರೆಗೆ ಕಾರೊಂದು ಉರುಳಿ ಬಿದ್ದು 4 ಜನರು ಮೃತರಾದರು. ಈ ದಾರುಣ ಘಟನೆ ಬಳಿಕ ಹಲವು ಕಡೆಗಳಲ್ಲಿ  ಇಂತಹ ಕೆರೆಗಳು ಇರುವುದರ ಬಗ್ಗೆ ಜನಸಾಮಾನ್ಯರು ಹೇಳುತ್ತಾರೆ.ಇಂತಹದ್ದೇ ಒಂದು ಕೆರೆಯ ಬಗ್ಗೆ ಸುಳ್ಯನ್ಯೂಸ್.ಕಾಂ ಗೆ ಫೋಟೋ ಸಹಿತ ಸಾರ್ವಜನಿಕರು ಕಳುಹಿಸಿದ್ದಾರೆ. ಅದರ ಕಡೆಗೆ ಬೆಳಕು ಹರಿಸಲಾಗಿದೆ. ಇದನ್ನು ಆಡಳಿತವು ಗಮನಿಸಿ ತುಸು ಮುಂಜಾಗ್ರತಾ ಕ್ರಮಗಳನ್ನು  ಕೈಗೊಂಡರೆ ದಾರುಣ ಘಟನೆಗಳು ಕಡಿಮೆ ಆದಾವು ಎಂಬ ಆಶಯದೊಂದಿಗೆ..


ಸುಳ್ಯ-ಪುತ್ತೂರು ರಸ್ತೆಯಲ್ಲಿ ಕೆರೆಗೆ ಕಾರು ಬಿದ್ದು 4 ಜನ ಮೃತಪಟ್ಟ ಬಳಿಕ ಇದೀಗ ಸಾರ್ವಜನಿಕರು ಎಚ್ಚರಿಕೆ ವಹಿಸಿ ಅಂತಹ ಘಟನೆಗಳು ಮರುಕಳಿಸಬಾರದು ಎಂದು ಜಾಗೃತೆ ವಹಿಸಿದ್ದಾರೆ. ಮಾಧ್ಯಮಗಳ ಮೂಲಕ ಆಡಳಿತವನ್ನು ಎಚ್ಚರಿಸುವ ಹಾಗೂ ಗಮನಸೆಳೆಯುವ ಪ್ರಯತ್ನ ಮಾಡಿದ್ದಾರೆ. ಈಗ ಸುಳ್ಯ-ಗುತ್ತಿಗಾರು ರಸ್ತೆ ನಡುವಿನ ನಾರ್ಣಕಜೆ ಬಳಿಯ ಕೆರೆಯ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಇಲ್ಲಿ ಇನ್ನಷ್ಟು ಮುಂಜಾಗ್ರತೆ ಬೇಕು ಎಂದು ಹೇಳಿದ್ದಾರೆ.

ಸುಳ್ಯ-ಗುತ್ತಿಗಾರು ರಸ್ತೆಯ ನಾರ್ಣಕಜೆ ಎಂಬಲ್ಲಿ ಕೆರೆಯೊಂದು ಇದೆ. ಇದಕ್ಕೆ ಈಗಾಗಲೇ ಲೋಕೋಪಯೋಗಿ ಇಲಾಖೆ ತಡೆಗೋಡೆ ಕಟ್ಟಿದೆ. ಆದರೆ ಅದು ಪೂರ್ತಿಯಾಗಿಲ್ಲ. ಈ ರಸ್ತೆ ಮೂಲಕ ಸ್ಥಳೀಯರು ಮಾತ್ರವಲ್ಲ ದೂರದ ಊರಿನಿಂದ ಅನೇಕರು ಕುಕ್ಕೆ ಸುಬ್ರಹ್ಮಣ್ಯದ ಕಡೆಗೆ ತೆರಳುತ್ತಾರೆ. ಹೀಗಾಗಿ ಪರವೂರಿನ ಮಂದಿಗೆ ಇಲ್ಲಿ ಕೆರೆ ಇರುವುದು  ಅರಿವಿಗೆ ಬರುವುದಿಲ್ಲ. ಗುತ್ತಿಗಾರು ಕಡೆಯಿಂದ ಬರುವ ವೇಳೆ ನಿಯಂತ್ರಣ ತಪ್ಪಿದರೆ ಅಪಾಯವಾಗುವ ಸಾಧ್ಯತೆ ಇದೆ. ಇಲ್ಲಿ ಯಾವುದೇ  ತಡೆಗೋಡೆ ಇಲ್ಲದೇ ಇರುವುದು ಹಾಗೂ ಕಾಡುಪೊದೆಗಳೂ ಇಲ್ಲಿ ತುಂಬಿರುವುದು  ಅಪಾಯಕ್ಕೆ ಕಾರಣವಾಗುತ್ತದೆ. ಈ ಹಿಂದೊಮ್ಮೆ ವಾಹನವೊಂದು ಇಲ್ಲಿ ಬಿದ್ದಿತ್ತು ಎಂದು ಸಾರ್ವಜನಿಕರು ನೆನಪು ಮಾಡುತ್ತಾರೆ. ಈ ಕಾರಣದಿಂದ ಇಲ್ಲಿ  ಪೂರ್ಣ ಪ್ರಮಾಣದಲ್ಲಿ ಇಡೀ ಕೆರೆಗೆ ರಸ್ತೆ ಭಾಗದಿಂದ ತಡೆಗೋಡೆ ಅಗತ್ಯ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಮೂಲಕ ಅಪಾಯ ತಪ್ಪಿಸಬೇಕು ಎಂದು ಆಡಳಿತದ ಗಮನ ಸೆಳೆದಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

3 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

5 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

5 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

11 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

11 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

14 hours ago