Advertisement
MIRROR FOCUS

ಸುಳ್ಯ-ಗುತ್ತಿಗಾರು ರಸ್ತೆಯಲ್ಲಿ ಅಪಾಯದ ಕೆರೆ ಇದೆ : ಮುಂಜಾಗ್ರತಾ ಕ್ರಮದ ಕಡೆಗೆ ಚಿಂತನೆ ನಡೆಯಬೇಕಿದೆ…

Share

ಇತ್ತೀಚೆಗೆ ಸುಳ್ಯ-ಪುತ್ತೂರು ರಸ್ತೆಯ ಬದಿಯ ಕೆರೆಗೆ ಕಾರೊಂದು ಉರುಳಿ ಬಿದ್ದು 4 ಜನರು ಮೃತರಾದರು. ಈ ದಾರುಣ ಘಟನೆ ಬಳಿಕ ಹಲವು ಕಡೆಗಳಲ್ಲಿ  ಇಂತಹ ಕೆರೆಗಳು ಇರುವುದರ ಬಗ್ಗೆ ಜನಸಾಮಾನ್ಯರು ಹೇಳುತ್ತಾರೆ.ಇಂತಹದ್ದೇ ಒಂದು ಕೆರೆಯ ಬಗ್ಗೆ ಸುಳ್ಯನ್ಯೂಸ್.ಕಾಂ ಗೆ ಫೋಟೋ ಸಹಿತ ಸಾರ್ವಜನಿಕರು ಕಳುಹಿಸಿದ್ದಾರೆ. ಅದರ ಕಡೆಗೆ ಬೆಳಕು ಹರಿಸಲಾಗಿದೆ. ಇದನ್ನು ಆಡಳಿತವು ಗಮನಿಸಿ ತುಸು ಮುಂಜಾಗ್ರತಾ ಕ್ರಮಗಳನ್ನು  ಕೈಗೊಂಡರೆ ದಾರುಣ ಘಟನೆಗಳು ಕಡಿಮೆ ಆದಾವು ಎಂಬ ಆಶಯದೊಂದಿಗೆ..


ಸುಳ್ಯ-ಪುತ್ತೂರು ರಸ್ತೆಯಲ್ಲಿ ಕೆರೆಗೆ ಕಾರು ಬಿದ್ದು 4 ಜನ ಮೃತಪಟ್ಟ ಬಳಿಕ ಇದೀಗ ಸಾರ್ವಜನಿಕರು ಎಚ್ಚರಿಕೆ ವಹಿಸಿ ಅಂತಹ ಘಟನೆಗಳು ಮರುಕಳಿಸಬಾರದು ಎಂದು ಜಾಗೃತೆ ವಹಿಸಿದ್ದಾರೆ. ಮಾಧ್ಯಮಗಳ ಮೂಲಕ ಆಡಳಿತವನ್ನು ಎಚ್ಚರಿಸುವ ಹಾಗೂ ಗಮನಸೆಳೆಯುವ ಪ್ರಯತ್ನ ಮಾಡಿದ್ದಾರೆ. ಈಗ ಸುಳ್ಯ-ಗುತ್ತಿಗಾರು ರಸ್ತೆ ನಡುವಿನ ನಾರ್ಣಕಜೆ ಬಳಿಯ ಕೆರೆಯ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಇಲ್ಲಿ ಇನ್ನಷ್ಟು ಮುಂಜಾಗ್ರತೆ ಬೇಕು ಎಂದು ಹೇಳಿದ್ದಾರೆ.

ಸುಳ್ಯ-ಗುತ್ತಿಗಾರು ರಸ್ತೆಯ ನಾರ್ಣಕಜೆ ಎಂಬಲ್ಲಿ ಕೆರೆಯೊಂದು ಇದೆ. ಇದಕ್ಕೆ ಈಗಾಗಲೇ ಲೋಕೋಪಯೋಗಿ ಇಲಾಖೆ ತಡೆಗೋಡೆ ಕಟ್ಟಿದೆ. ಆದರೆ ಅದು ಪೂರ್ತಿಯಾಗಿಲ್ಲ. ಈ ರಸ್ತೆ ಮೂಲಕ ಸ್ಥಳೀಯರು ಮಾತ್ರವಲ್ಲ ದೂರದ ಊರಿನಿಂದ ಅನೇಕರು ಕುಕ್ಕೆ ಸುಬ್ರಹ್ಮಣ್ಯದ ಕಡೆಗೆ ತೆರಳುತ್ತಾರೆ. ಹೀಗಾಗಿ ಪರವೂರಿನ ಮಂದಿಗೆ ಇಲ್ಲಿ ಕೆರೆ ಇರುವುದು  ಅರಿವಿಗೆ ಬರುವುದಿಲ್ಲ. ಗುತ್ತಿಗಾರು ಕಡೆಯಿಂದ ಬರುವ ವೇಳೆ ನಿಯಂತ್ರಣ ತಪ್ಪಿದರೆ ಅಪಾಯವಾಗುವ ಸಾಧ್ಯತೆ ಇದೆ. ಇಲ್ಲಿ ಯಾವುದೇ  ತಡೆಗೋಡೆ ಇಲ್ಲದೇ ಇರುವುದು ಹಾಗೂ ಕಾಡುಪೊದೆಗಳೂ ಇಲ್ಲಿ ತುಂಬಿರುವುದು  ಅಪಾಯಕ್ಕೆ ಕಾರಣವಾಗುತ್ತದೆ. ಈ ಹಿಂದೊಮ್ಮೆ ವಾಹನವೊಂದು ಇಲ್ಲಿ ಬಿದ್ದಿತ್ತು ಎಂದು ಸಾರ್ವಜನಿಕರು ನೆನಪು ಮಾಡುತ್ತಾರೆ. ಈ ಕಾರಣದಿಂದ ಇಲ್ಲಿ  ಪೂರ್ಣ ಪ್ರಮಾಣದಲ್ಲಿ ಇಡೀ ಕೆರೆಗೆ ರಸ್ತೆ ಭಾಗದಿಂದ ತಡೆಗೋಡೆ ಅಗತ್ಯ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಮೂಲಕ ಅಪಾಯ ತಪ್ಪಿಸಬೇಕು ಎಂದು ಆಡಳಿತದ ಗಮನ ಸೆಳೆದಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

8 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

8 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

16 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

21 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

22 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago