Advertisement
MIRROR FOCUS

ಸುಳ್ಯ-ಗುತ್ತಿಗಾರು ರಸ್ತೆಯಲ್ಲಿ ಅಪಾಯದ ಕೆರೆ ಇದೆ : ಮುಂಜಾಗ್ರತಾ ಕ್ರಮದ ಕಡೆಗೆ ಚಿಂತನೆ ನಡೆಯಬೇಕಿದೆ…

Share

ಇತ್ತೀಚೆಗೆ ಸುಳ್ಯ-ಪುತ್ತೂರು ರಸ್ತೆಯ ಬದಿಯ ಕೆರೆಗೆ ಕಾರೊಂದು ಉರುಳಿ ಬಿದ್ದು 4 ಜನರು ಮೃತರಾದರು. ಈ ದಾರುಣ ಘಟನೆ ಬಳಿಕ ಹಲವು ಕಡೆಗಳಲ್ಲಿ  ಇಂತಹ ಕೆರೆಗಳು ಇರುವುದರ ಬಗ್ಗೆ ಜನಸಾಮಾನ್ಯರು ಹೇಳುತ್ತಾರೆ.ಇಂತಹದ್ದೇ ಒಂದು ಕೆರೆಯ ಬಗ್ಗೆ ಸುಳ್ಯನ್ಯೂಸ್.ಕಾಂ ಗೆ ಫೋಟೋ ಸಹಿತ ಸಾರ್ವಜನಿಕರು ಕಳುಹಿಸಿದ್ದಾರೆ. ಅದರ ಕಡೆಗೆ ಬೆಳಕು ಹರಿಸಲಾಗಿದೆ. ಇದನ್ನು ಆಡಳಿತವು ಗಮನಿಸಿ ತುಸು ಮುಂಜಾಗ್ರತಾ ಕ್ರಮಗಳನ್ನು  ಕೈಗೊಂಡರೆ ದಾರುಣ ಘಟನೆಗಳು ಕಡಿಮೆ ಆದಾವು ಎಂಬ ಆಶಯದೊಂದಿಗೆ..


ಸುಳ್ಯ-ಪುತ್ತೂರು ರಸ್ತೆಯಲ್ಲಿ ಕೆರೆಗೆ ಕಾರು ಬಿದ್ದು 4 ಜನ ಮೃತಪಟ್ಟ ಬಳಿಕ ಇದೀಗ ಸಾರ್ವಜನಿಕರು ಎಚ್ಚರಿಕೆ ವಹಿಸಿ ಅಂತಹ ಘಟನೆಗಳು ಮರುಕಳಿಸಬಾರದು ಎಂದು ಜಾಗೃತೆ ವಹಿಸಿದ್ದಾರೆ. ಮಾಧ್ಯಮಗಳ ಮೂಲಕ ಆಡಳಿತವನ್ನು ಎಚ್ಚರಿಸುವ ಹಾಗೂ ಗಮನಸೆಳೆಯುವ ಪ್ರಯತ್ನ ಮಾಡಿದ್ದಾರೆ. ಈಗ ಸುಳ್ಯ-ಗುತ್ತಿಗಾರು ರಸ್ತೆ ನಡುವಿನ ನಾರ್ಣಕಜೆ ಬಳಿಯ ಕೆರೆಯ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಇಲ್ಲಿ ಇನ್ನಷ್ಟು ಮುಂಜಾಗ್ರತೆ ಬೇಕು ಎಂದು ಹೇಳಿದ್ದಾರೆ.

ಸುಳ್ಯ-ಗುತ್ತಿಗಾರು ರಸ್ತೆಯ ನಾರ್ಣಕಜೆ ಎಂಬಲ್ಲಿ ಕೆರೆಯೊಂದು ಇದೆ. ಇದಕ್ಕೆ ಈಗಾಗಲೇ ಲೋಕೋಪಯೋಗಿ ಇಲಾಖೆ ತಡೆಗೋಡೆ ಕಟ್ಟಿದೆ. ಆದರೆ ಅದು ಪೂರ್ತಿಯಾಗಿಲ್ಲ. ಈ ರಸ್ತೆ ಮೂಲಕ ಸ್ಥಳೀಯರು ಮಾತ್ರವಲ್ಲ ದೂರದ ಊರಿನಿಂದ ಅನೇಕರು ಕುಕ್ಕೆ ಸುಬ್ರಹ್ಮಣ್ಯದ ಕಡೆಗೆ ತೆರಳುತ್ತಾರೆ. ಹೀಗಾಗಿ ಪರವೂರಿನ ಮಂದಿಗೆ ಇಲ್ಲಿ ಕೆರೆ ಇರುವುದು  ಅರಿವಿಗೆ ಬರುವುದಿಲ್ಲ. ಗುತ್ತಿಗಾರು ಕಡೆಯಿಂದ ಬರುವ ವೇಳೆ ನಿಯಂತ್ರಣ ತಪ್ಪಿದರೆ ಅಪಾಯವಾಗುವ ಸಾಧ್ಯತೆ ಇದೆ. ಇಲ್ಲಿ ಯಾವುದೇ  ತಡೆಗೋಡೆ ಇಲ್ಲದೇ ಇರುವುದು ಹಾಗೂ ಕಾಡುಪೊದೆಗಳೂ ಇಲ್ಲಿ ತುಂಬಿರುವುದು  ಅಪಾಯಕ್ಕೆ ಕಾರಣವಾಗುತ್ತದೆ. ಈ ಹಿಂದೊಮ್ಮೆ ವಾಹನವೊಂದು ಇಲ್ಲಿ ಬಿದ್ದಿತ್ತು ಎಂದು ಸಾರ್ವಜನಿಕರು ನೆನಪು ಮಾಡುತ್ತಾರೆ. ಈ ಕಾರಣದಿಂದ ಇಲ್ಲಿ  ಪೂರ್ಣ ಪ್ರಮಾಣದಲ್ಲಿ ಇಡೀ ಕೆರೆಗೆ ರಸ್ತೆ ಭಾಗದಿಂದ ತಡೆಗೋಡೆ ಅಗತ್ಯ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಮೂಲಕ ಅಪಾಯ ತಪ್ಪಿಸಬೇಕು ಎಂದು ಆಡಳಿತದ ಗಮನ ಸೆಳೆದಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

6 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

8 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

17 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

17 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

17 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

22 hours ago