Advertisement
ಸುದ್ದಿಗಳು

ಸುಳ್ಯ ಗೃಹರಕ್ಷಕದಳ ಘಟಕಕ್ಕೆ ಜಿಲ್ಲಾ ಕಮಾಡೆಂಟ್ ಭೇಟಿ – ಪ್ರವಾಹ ರಕ್ಷಣಾ ತಂಡ ರಚನೆ

Share

ಸುಳ್ಯ: ಗೃಹರಕ್ಷಕ ದಳದ ದಕ್ಷಿಣ ಕನ್ನಡ ಜಿಲ್ಲಾ ಕಮಾಡೆಂಟ್ ಡಾ.ಮುರಲೀ ಮೋಹನ್ ಚೂಂತಾರು ಭೇಟಿ ನೀಡಿ ಕವಾಯತು ವೀಕ್ಷಣೆ ನಡೆಸಿದರು.

ನಂತರ ಕುಂದುಕೊರತೆಗಳ ಸಭೆ ನಡೆಸಿ ಮಾತನಾಡಿದ ಅವರು ಕೇರಳ ರಾಜ್ಯ ಹಾಗೂ ಕರ್ನಾಟಕ ರಾಜ್ಯ ಚುನಾವಣಾ ಕರ್ತವ್ಯದಲ್ಲಿ ಭಾಗವಹಿಸಿದ ಘಟಕದ ಎಲ್ಲಾ ಗೃಹರಕ್ಷಕರಿಗೆ ಅಭಿನಂದನೆ ಸಲ್ಲಿಸಿದರು ಹಾಗೂ ಇಲಾಖೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು ಘಟಕಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಸರಕಾರದ ವತಿಯಿಂದ ಕೊಡಿಸುವ ಬಗ್ಗೆ ಭರವಸೆ ನೀಡಿದರು. ಅಲ್ಲದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಹಾಗೂ ಇತರ ಸರಕಾರಿ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಗೃಹರಕ್ಷಕರಿಗೆ ತಲಾ 3 ತಿಂಗಳಿಗೊಮ್ಮೆ ಸೇವಾ ಕ್ಷೇತ್ರದಲ್ಲಿ ಕಡ್ಡಾಯವಾಗಿ ಬದಲಾವಣೆ ನೀತಿ ಜಾರಿಗೊಳಿಸಲಾಗುವುದು. ಇದು ಹೊಸತನಕ್ಕೂ ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ಹೇಳಿದರು

ಪ್ರವಾಹ ರಕ್ಷಣಾ ತಂಡ ರಚನೆ ಹಾಗೂ ಕಂಟ್ರೋಲ್ ರೂಂ ಸ್ಥಾಪನೆ:

ಮುಂಬರುವ ಮುಂಗಾರು ಮಳೆಗಾಲ ಸಮಯಕ್ಕೆ ಕರ್ತವ್ಯ ನಿರ್ವಹಿಸಲು ಗೃಹರಕ್ಷಕರ ಕಂಟ್ರೋಲ್ ರೂಂ ನ್ನು ಸುಳ್ಯ ಘಟಕದ ಕಚೇರಿಯಲ್ಲಿ ಸ್ಥಾಪನೆ ಮಾಡಿ ಎಂದು ಕಮಾಡೆಂಟ್ ರವರು ಸುಳ್ಯ ಘಟಕದ ಘಟಕಾಧಿಕಾರಿ ಜಯಂತ್ ಶೆಟ್ಟಿ ಹಾಗೂ ಘಟಕದ ಸಾರ್ಜೆಂಟ್ ಅಬ್ದುಲ್ ಗಫೂರ್ ರವರಿಗೆ ಸೂಚಿಸಿದರು. ಮುಂಬರುವ ಮಳೆಗಾಲದ ಸಮಯದಲ್ಲಿ ಪ್ರಕೃತಿ ವಿಕೋಪ ಸಮಯದಲ್ಲಿ ಕರ್ತವ್ಯ ನಿರ್ವಹಿಸಲು ಸುಳ್ಯ ಘಟಕದ ಗೃಹರಕ್ಷಕ ಸಿಬ್ಬಂದಿಗಳ ನುರಿತ ಪ್ರವಾಹ ರಕ್ಷಣಾ ತಂಡವನ್ನು ರಚಿಸಿದರು. ಗೃಹ ರಕ್ಷಕರು ಪ್ರಕೃತಿ ವಿಕೋಪ ಸಮಯದಲ್ಲಿ ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ ಕಳೆದ ಬಾರಿ ಸುಳ್ಯದ ಜೋಡುಪಾಲ ಸಹಿತ ತಾಲೂಕಿನ ವಿವಿಧ ಭಾಗಗಳಲ್ಲಿ ಮಳೆಯಿಂದ ಸಾಕಷ್ಟು ಹಾನಿ ಉಂಟಾಗಿದ್ದು ಗೃಹರಕ್ಷಕ ಸಿಬ್ಬಂದಿ ಗಳು ಬಹಳ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ ಈ ಬಾರಿಯೂ ಯಾವುದೇ ಘಟನೆಗಳು ನಡೆದರೂ ಅದನ್ನು ಎದುರಿಸಲು ಪ್ರತಿಯೊಬ್ಬ ಗೃಹರಕ್ಷಕರು ಸಿದ್ಧತೆ ಯಿಂದ ಇರಲು ಮುರಳ ಕರೆ ನೀಡಿದರು ಈ ಸಂದರ್ಭದಲ್ಲಿ ಸುಳ್ಯ ಘಟಕದ ಘಟಕಾಧಿಕಾರಿ ಜಯಂತ ಶೆಟ್ಟಿ ಕಚೇರಿ ಕಾರ್ಯ ನಿರ್ವಾಹಕ ಅಬ್ದುಲ್ ಗಫೂರ್ ಕವಾಯತು ನಾಯಕರುಗಳಾದ ಕೆ ಅಶ್ವತ್ ಪ್ರಸಾದ್ ಬಿ ಗೋಪಾಲ್ ಪ್ರಭಾಕರ ಪೈ ಹಾಗೂ ಘಟಕದ ಎಲ್ಲಾ ಸಿಬ್ಬಂದಿಗಳು ಉಪಸ್ಥರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

4 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

4 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

12 hours ago