Advertisement
ಸುದ್ದಿಗಳು

ಸುಳ್ಯ ಗೃಹರಕ್ಷಕದಳ ಘಟಕಕ್ಕೆ ಜಿಲ್ಲಾ ಕಮಾಡೆಂಟ್ ಭೇಟಿ – ಪ್ರವಾಹ ರಕ್ಷಣಾ ತಂಡ ರಚನೆ

Share

ಸುಳ್ಯ: ಗೃಹರಕ್ಷಕ ದಳದ ದಕ್ಷಿಣ ಕನ್ನಡ ಜಿಲ್ಲಾ ಕಮಾಡೆಂಟ್ ಡಾ.ಮುರಲೀ ಮೋಹನ್ ಚೂಂತಾರು ಭೇಟಿ ನೀಡಿ ಕವಾಯತು ವೀಕ್ಷಣೆ ನಡೆಸಿದರು.

ನಂತರ ಕುಂದುಕೊರತೆಗಳ ಸಭೆ ನಡೆಸಿ ಮಾತನಾಡಿದ ಅವರು ಕೇರಳ ರಾಜ್ಯ ಹಾಗೂ ಕರ್ನಾಟಕ ರಾಜ್ಯ ಚುನಾವಣಾ ಕರ್ತವ್ಯದಲ್ಲಿ ಭಾಗವಹಿಸಿದ ಘಟಕದ ಎಲ್ಲಾ ಗೃಹರಕ್ಷಕರಿಗೆ ಅಭಿನಂದನೆ ಸಲ್ಲಿಸಿದರು ಹಾಗೂ ಇಲಾಖೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು ಘಟಕಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಸರಕಾರದ ವತಿಯಿಂದ ಕೊಡಿಸುವ ಬಗ್ಗೆ ಭರವಸೆ ನೀಡಿದರು. ಅಲ್ಲದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಹಾಗೂ ಇತರ ಸರಕಾರಿ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಗೃಹರಕ್ಷಕರಿಗೆ ತಲಾ 3 ತಿಂಗಳಿಗೊಮ್ಮೆ ಸೇವಾ ಕ್ಷೇತ್ರದಲ್ಲಿ ಕಡ್ಡಾಯವಾಗಿ ಬದಲಾವಣೆ ನೀತಿ ಜಾರಿಗೊಳಿಸಲಾಗುವುದು. ಇದು ಹೊಸತನಕ್ಕೂ ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ಹೇಳಿದರು

ಪ್ರವಾಹ ರಕ್ಷಣಾ ತಂಡ ರಚನೆ ಹಾಗೂ ಕಂಟ್ರೋಲ್ ರೂಂ ಸ್ಥಾಪನೆ:

ಮುಂಬರುವ ಮುಂಗಾರು ಮಳೆಗಾಲ ಸಮಯಕ್ಕೆ ಕರ್ತವ್ಯ ನಿರ್ವಹಿಸಲು ಗೃಹರಕ್ಷಕರ ಕಂಟ್ರೋಲ್ ರೂಂ ನ್ನು ಸುಳ್ಯ ಘಟಕದ ಕಚೇರಿಯಲ್ಲಿ ಸ್ಥಾಪನೆ ಮಾಡಿ ಎಂದು ಕಮಾಡೆಂಟ್ ರವರು ಸುಳ್ಯ ಘಟಕದ ಘಟಕಾಧಿಕಾರಿ ಜಯಂತ್ ಶೆಟ್ಟಿ ಹಾಗೂ ಘಟಕದ ಸಾರ್ಜೆಂಟ್ ಅಬ್ದುಲ್ ಗಫೂರ್ ರವರಿಗೆ ಸೂಚಿಸಿದರು. ಮುಂಬರುವ ಮಳೆಗಾಲದ ಸಮಯದಲ್ಲಿ ಪ್ರಕೃತಿ ವಿಕೋಪ ಸಮಯದಲ್ಲಿ ಕರ್ತವ್ಯ ನಿರ್ವಹಿಸಲು ಸುಳ್ಯ ಘಟಕದ ಗೃಹರಕ್ಷಕ ಸಿಬ್ಬಂದಿಗಳ ನುರಿತ ಪ್ರವಾಹ ರಕ್ಷಣಾ ತಂಡವನ್ನು ರಚಿಸಿದರು. ಗೃಹ ರಕ್ಷಕರು ಪ್ರಕೃತಿ ವಿಕೋಪ ಸಮಯದಲ್ಲಿ ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ ಕಳೆದ ಬಾರಿ ಸುಳ್ಯದ ಜೋಡುಪಾಲ ಸಹಿತ ತಾಲೂಕಿನ ವಿವಿಧ ಭಾಗಗಳಲ್ಲಿ ಮಳೆಯಿಂದ ಸಾಕಷ್ಟು ಹಾನಿ ಉಂಟಾಗಿದ್ದು ಗೃಹರಕ್ಷಕ ಸಿಬ್ಬಂದಿ ಗಳು ಬಹಳ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ ಈ ಬಾರಿಯೂ ಯಾವುದೇ ಘಟನೆಗಳು ನಡೆದರೂ ಅದನ್ನು ಎದುರಿಸಲು ಪ್ರತಿಯೊಬ್ಬ ಗೃಹರಕ್ಷಕರು ಸಿದ್ಧತೆ ಯಿಂದ ಇರಲು ಮುರಳ ಕರೆ ನೀಡಿದರು ಈ ಸಂದರ್ಭದಲ್ಲಿ ಸುಳ್ಯ ಘಟಕದ ಘಟಕಾಧಿಕಾರಿ ಜಯಂತ ಶೆಟ್ಟಿ ಕಚೇರಿ ಕಾರ್ಯ ನಿರ್ವಾಹಕ ಅಬ್ದುಲ್ ಗಫೂರ್ ಕವಾಯತು ನಾಯಕರುಗಳಾದ ಕೆ ಅಶ್ವತ್ ಪ್ರಸಾದ್ ಬಿ ಗೋಪಾಲ್ ಪ್ರಭಾಕರ ಪೈ ಹಾಗೂ ಘಟಕದ ಎಲ್ಲಾ ಸಿಬ್ಬಂದಿಗಳು ಉಪಸ್ಥರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

4 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

5 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

7 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

7 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

21 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago