Advertisement
ಸುದ್ದಿಗಳು

ಸುಳ್ಯ ಗೃಹರಕ್ಷಕದಳ ಘಟಕ ಕ್ರಿಯಾಶೀಲ – ಡಾ|ಮುರಲೀ ಮೋಹನ್ ಚೂಂತಾರು

Share

ಸುಳ್ಯ: ಜಿಲ್ಲೆಯಲ್ಲಿ ಸುಳ್ಯ ಗೃಹರಕ್ಷಕದಳದ ಘಟಕ ಅತ್ಯಂತ ಕ್ರಿಯಾಶೀಲ ಘಟಕ ಹಾಗೂ ಪ್ರಸ್ತುತ ವರ್ಷಗಳಲ್ಲಿ ಪ್ರಾಕೃತಿಕ ವಿಕೋಪ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ರಕ್ಷಿಸುವ ಮೂಲಕ ಜಿಲ್ಲಾ ಗೃಹರಕ್ಷಕ ಇಲಾಖೆ ಉತ್ತಮ ಕಾರ್ಯ ನಿರ್ವಹಿಸಿದೆ ಎಂದು ಗೃಹರಕ್ಷಕದಳದ ಜಿಲ್ಲಾ ಕಮಾಡೆಂಟ್ ಡಾ|ಮುರಲೀ ಮೋಹನ್ ಚೂಂತಾರು ಹೇಳಿದರು.

ಅವರು  ಸುಳ್ಯ ಜೂನಿಯರ್ ಕಾಲೇಜು ಬಳಿ ಇರುವ ಸುಳ್ಯ ಗೃಹರಕ್ಷಕದಳ ಹಾಗೂ ಪೌರರಕ್ಷಣಾದಳ ಕಚೇರಿಗೆ ಭೇಟಿ  ನೀಡಿದ ಬಳಿಕ ಮಾತನಾಡಿದರು. ಇದೇ ಸಂದರ್ಭ  ಘಟಕದ ಕಚೇರಿಯಲ್ಲಿ ಪ್ರತಿ ಗೃಹರಕ್ಷಕರ ಅಹವಾಲು ಸ್ವೀಕರಿಸಿದರು.

ಘಟಕದ ವತಿಯಿಂದ ವನಮಹೋತ್ಸವ: ಸುಳ್ಯ ಘಟಕದ ಕಚೇರಿ ಆವರಣದಲ್ಲಿ ವನಮಹೋತ್ಸವ ನಡೆಯಿತು. ಈ ವೇಳೆಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸುಳ್ಯ ಲಯನ್ಸ್ ಕ್ಲಬ್ ನ ಮಾಜಿ ಗವರ್ನರ್ ಲಯನ್ಸ್ ಎಂ.ಬಿ.ಸದಾಶಿವ ಮಾತನಾಡಿ ಪ್ರಸ್ತುತ ವರ್ಷಗಳಲ್ಲಿ ಸುಳ್ಯ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪ ಸಮಯದಲ್ಲಿ ಪರಿಣಾಮಕಾರಿ ಕರ್ತವ್ಯ ನಿರ್ವಹಿಸಿದ ಗೃಹರಕ್ಷಕರನ್ನು ಅಭಿನಂದಿಸಿದರು ಹಾಗೂ ತುರ್ತು ಸಂಧರ್ಭದಲ್ಲಿ ತಮ್ಮ ಪ್ರಾಣದ ಹಂಗನ್ನೂ ತೊರೆದು ಸಾರ್ವಜನಿಕ ಆಸ್ತಿ ಪಾಸ್ತಿ ರಕ್ಷಣೆ ಮಾಡಿದ ಗೃಹರಕ್ಷಕದಳದ ಕಾರ್ಯ ಶ್ಲಾಘನೀಯ ಗೃಹರಕ್ಷಕರು ಸಮಾಜದ ಆಸ್ತಿ ಎಂದು ನುಡಿದರು.

ಸುಳ್ಯ ಅರಣ್ಯ ಅಭಿವೃದ್ಧಿ ನಿಗಮದ ಮೆನೇಜರ್ ಲಯನ್ಸ್ ರಂಗನಾಥ್ ಮಾತನಾಡಿ ಮನಷ್ಯನ ಸ್ವಾರ್ಥಕ್ಕಾಗಿ ಪರಿಸರ ನಾಶವಾಗುತ್ತಿದೆ ಪರಿಸರದ ಅಸೋಮತೋಲನದಿಂದ ನಮಗೆ ತೊಂದರೆ ನಮಗಾಗಿ ಪರಿಸರ ರಕ್ಷಣೆ ಅನಿವಾರ್ಯ ಗೃಹರಕ್ಷಕದಳದ ವನಮಹೋತ್ಸವದಂತಹ ಕಾರ್ಯಕ್ರಮ ಶ್ಲಾಘನೀಯ ಎಂದರು.

ಕಮಾಂಡೆಂಟ್ ಅವರಿಗೆ ಸುಳ್ಯ ಘಟಕದಿಂದ ಸನ್ಮಾನ: ಇದೆ ಸಂಧರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಡಾ|ಮುರಲೀ ಮೋಹನ್ ಚೂಂತಾರು ಅವರು  ಬರೆದ ಸಂಜೀವಿನಿ ಎಂಬ ಪುಸ್ತಕ ಕ್ಕೆ ರಾಜ್ಯ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಅವರನ್ನು ಘಟಕದ ವತಿಯಿಂದ ಸುಳ್ಯ ಲಯನ್ಸ್ ಅಧಕ್ಷರಾದ ಗಂಗಾಧರ ರೈ ಹಾಗೂ ಎಂ.ಬಿ.ಸದಾಶಿವ ರವರು ಸನ್ಮಾನಿಸಿದರು.

ಈ ವೇಳೆಗೆ ಸುಳ್ಯ ಘಟಕಾಧಿಕಾರಿ ಜಯಂತ್ ಶೆಟ್ಟಿ , ಸುಳ್ಯ ಘಟಕದ ಸಾರ್ಜೆಂಟ್ ಅಬ್ದುಲ್ ಗಫೋರ್, ರಾಜೇಶ್.ಬಿ ಎನ್.ಆರ್.ಸೋಮನಾಥ್, ಅಶ್ವತ್ಥ್. ಕೆ,ಘಟಕದ 60ಗೃಹರಕ್ಷಕರು,ರಕ್ಷಕಿಯರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

6 minutes ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

23 hours ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

1 day ago

ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ

ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…

1 day ago

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!

ಕಾಕ್ರೋಚ್‌ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…

2 days ago

ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…

2 days ago